ಮಂಗಳವಾರ, ಆಗಸ್ಟ್ 16, 2011

ಈ ಲೇಖನ ಇಂದಿಗೂ ಪ್ರಸ್ತುತ


ಪಟೇಲ್, ಶಾಸ್ತ್ರಿಯನ್ನೇ ಬಿಡದವರು ಅಣ್ಣಾನನ್ನು ಉಳಿಸಿಯಾರೇ?

by PRATAP SIMHA
23rd April 2011
ಖಂಡಿತ ಆ ಬಗ್ಗೆ ಅನುಮಾನಗಳು ಕಾಡುತ್ತಿವೆ. ಇತರರ ಯಶಸ್ಸನ್ನು ಸಹಿಸುವ ಗುಣ ನೆಹರು ಕುಟುಂಬದ ರಕ್ತದಲ್ಲೇ ಇಲ್ಲ. ಭಾರತ ರಾಷ್ಟ್ರೀಯ ಸೇನೆಯನ್ನು (INA) ಕಟ್ಟಿದ್ದ ಸುಭಾಷ್್ಚಂದ್ರ ಬೋಸ್, ಬರ್ಮಾ ಮೂಲಕ ಬ್ರಿಟಿಷರ ಮೇಲೆ ದಾಳಿ ಮಾಡುವುದಾಗಿ 1944ರಲ್ಲಿ ರೇಡಿಯೋ ಭಾಷಣ ಮಾಡಿದಾಗ  “ಸುಭಾಷ್ ವಿರುದ್ಧ ನಾನೇ ಖಡ್ಗ ಹಿಡಿದು ಹೋರಾಡುತ್ತೇನೆ’ ಎಂದು ಸಾರ್ವಜನಿಕವಾಗಿ ಹೇಳಿದ್ದ ವ್ಯಕ್ತಿ ಜವಾಹರಲಾಲ್ ನೆಹರು. ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುವ ಸೂಚನೆಯನ್ನು ಸ್ವಾತಂತ್ರ್ಯ ಪೂರ್ವದಲ್ಲೇ ನೀಡಿದ್ದರು. ಅಂತಹ ನೆಹರು ಕುಟುಂಬ ಇಡೀ ದೇಶವಾಸಿಗಳ ಕಣ್ಣಲ್ಲಿ ಹೀರೋ ಆಗಿ ಹೊರಹೊಮ್ಮಿರುವ ಅಣ್ಣಾ ಹಜಾರೆಯವರನ್ನು ಬಿಡುತ್ತದೆಯೇ? ಕಪಿಲ್ ಸಿಬಲ್, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ಮನೀಶ್ ತಿವಾರಿ ನೀಡುತ್ತಿರುವ ಹೇಳಿಕೆಗಳು, ಕೆಸರೆರಚುವ ಪ್ರಯತ್ನಗಳು ಏನನ್ನು ಸೂಚಿಸುತ್ತಿವೆ? ಇದುವರೆಗೂ ನೆಹರು ಕುಟುಂಬ ಹಾಗೂ ಕಾಂಗ್ರೆಸ್ ಭಟ್ಟಂಗಿಗಳು  “ತುಳಿದು’ ಬಂದ ಹಾದಿಯಾದರೂ ಹೇಗಿದೆ?
ಘಟನೆ-1
“The power of reconstruction is always greater than the power of destruction”! ನಮ್ಮ ದೇಶದ ಅತ್ಮಗೌರವದ ಪ್ರತೀಕದಂತಿರುವ ಸೋಮನಾಥ ದೇವಾಲಯದ ಅಡಿಗಲ್ಲು ಇಡುವ ಸಮಾರಂಭಕ್ಕೆ ಅಗಮಿಸಿದ್ದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೆಂದಿದ್ದರು. ಜುನಾಯದ್, ಮಹಮದ್ ಘಜ್ನಿ, ಅಲ್ಲಾವುದ್ದೀನ್ ಖಿಲ್ಜಿ, ಮುಜಫ್ಫರ್ ಶಾ, ಮಹಮದ್ ಬೆಗ್ದಾ ಹಾಗೂ ಕೊನೆಯದಾಗಿ ಮೊಘಲ್ ದೊರೆ ಔರಂಗಜೇಬ ಇವರಿಂದ ಸ್ವಾತಂತ್ರ್ಯ ಬರುವುದಕ್ಕೂ ಮುನ್ನ ಸೋಮನಾಥ ದೇವಾಲಯ 6 ಬಾರಿ ನಾಶಗೊಂಡು 5 ಸಲ ಪುನರ್ ನಿರ್ಮಾಣಗೊಂಡಿತ್ತು. ಸೋಮನಾಥ ದೇವಾಲಯವಿದ್ದಿದ್ದು ಪ್ರಭಾಸ್ ಪಟ್ಟಣದಲ್ಲಿ. ಅದು ಜುನಾಗಡ್್ಗೆ ಸೇರಿತ್ತು. ಜನಸಂಖ್ಯೆಯ ಶೇ. 80 ರಷ್ಟು ಹಿಂದುಗಳೇ ಇದ್ದರೂ ಅಲ್ಲಿನ ನವಾಬ ಜುನಾಗಢ್ ಅನ್ನು ಪಾಕಿಸ್ತಾನದೊಂದಿಗೆ ಸೇರ್ಪಡೆ ಮಾಡಲು ಹವಣಿಸುತ್ತಿದ್ದ. ಇದರ ವಿರುದ್ಧ ಬಂಡೆದ್ದ ಜನ ಶಾಮಲ್್ದಾಸ್ ಗಾಂಧಿ ನೇತೃತ್ವದಲ್ಲಿ ಬದಲಿ ಸರ್ಕಾರ ರಚಿಸಿದರು. ದಿಕ್ಕೆಟ್ಟ ನವಾಬ ಪಾಕಿಸ್ತಾನಕ್ಕೆ ಪಲಾಯನ ಮಾಡಿದ. ಆನಂತರ ಭಾರತೀಯ ಒಕ್ಕೂಟಕ್ಕೆ ಸೇರಿಸಿಕೊಳ್ಳುವಂತೆ ಶಾಮಲ್್ದಾಸ್ ಕರೆಕೊಟ್ಟ ಕಾರಣ 1947, ನವೆಂಬರ್ 12ರಂದು ಖುದ್ದು ಅಗಮಿಸಿದ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್, ಜುನಾಗಢದ ಸೇರ್ಪಡೆ ಜತೆಗೆ ಸೋಮನಾಥ ದೇವಾಲಯದ ಪುನರ್ ನಿರ್ಮಾಣಕ್ಕೂ ಆದೇಶ ನೀಡಿದರು. ಅಂತಹ ಪ್ರಸ್ತಾವವನ್ನಿಟ್ಟುಕೊಂಡು ಸರ್ದಾರ್ ಪಟೇಲ್, ಕೆ.ಎಂ. ಮುನ್ಷಿ ಮತ್ತಿತರ ಕಾಂಗ್ರೆಸ್ ನಾಯಕರು ಗಾಂಧೀಜಿ ಬಳಿಗೆ ಹೋದಾಗ ಬಹಳ ಖುಷಿಯಿಂದಲೇ ಸಮ್ಮತಿಸಿದ ಮಹಾತ್ಮ, ಜನರ ದೇಣಿಗೆಯಿಂದ ಮರು ನಿರ್ಮಾಣ ಕಾರ್ಯ ನಡೆಯಲಿ ಎಂದರು.
ಅದರೆ ಈ ಘಟನೆಯಿಂದ ಮುಸ್ಲಿಮರಿಗಿಂತ ಹೆಚ್ಚು ಕೋಪ ಬಂದಿದ್ದು ಕಾಶ್ಮೀರಿ ಪಂಡಿತ ಜವಾಹರಲಾಲ್ ನೆಹರುಗೆ!
ಅವರು ಸೋಮನಾಥ ದೇವಾಲಯದ ಪುನರ್ ನಿರ್ಮಾಣವನ್ನು ಹಿಂದು ಪುನರುತ್ಥಾನದಂತೆ ಕಂಡರು. ಆದರೇನಂತೆ ಉಕ್ಕಿನ ಮನುಷ್ಯ ಪಟೇಲ್ ಗಂಡೆದೆಯ ಮುಂದೆ ಉತ್ತರ ಕುಮಾರನಂತಿದ್ದ ನೆಹರು ಆರ್ಭಟ ನಡೆಯಲಿಲ್ಲ. ಸೋಮನಾಥ ದೇವಾಲಯದ ಸ್ಥಳದಲ್ಲಿದ್ದ ಮಸೀದಿಯನ್ನು ಎತ್ತಂಗಡಿ ಮಾಡಿದರು. ಈ ಮಧ್ಯೆ ಸರ್ದಾರ್ ಪಟೇಲ್ ಹಾಗೂ ಗಾಂಧೀಜಿ ಇಬ್ಬರೂ ತೀರಿಕೊಂಡರು. ಮುನ್ಷಿ ನೇತೃತ್ವದಲ್ಲಿ ಪುನರ್ ನಿರ್ಮಾಣ ಕಾರ್ಯವೇನೋ ಮುಂದುವರಿಯಿತು. ಆದರೆ 1964ರವರೆಗೂ ಬದುಕಿದ್ದ ನೆಹರು, ಸರ್ದಾರ್ ಪಟೇಲ್ ಹೆಸರನ್ನು ಯಾವೊಬ್ಬ ಕಾಂಗ್ರೆಸ್ಸಿಗರೂ ಎತ್ತದಂತೆ ಮಾಡಿದರು! ಇವತ್ತು ಬಿಜೆಪಿ, ಆರೆಸ್ಸೆಸ್ಸಿಗರ ಬಾಯಲ್ಲಿ ಸರ್ದಾರ್ ಪಟೇಲ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಕೇಳಬಹುದು. ರಾಷ್ಟ್ರವಾದಿಗಳಿಗಂತೂ ಸರ್ದಾರ್ ಪಟೇಲ್ ಯಾವತ್ತೂ ಆದರ್ಶಪ್ರಾಯ. ಆದರೆ ಒಬ್ಬ ಪಂಚಾಯಿತಿ ಮಟ್ಟದ ಕಾಂಗ್ರೆಸ್ಸಿಗನಿಂದ ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕನವರೆಗೂ ಒಬ್ಬರಾದರೂ ಸರ್ದಾರ್ ಪಟೇಲ್ ನಮ್ಮ ಹೆಮ್ಮೆಯ ನಾಯಕ ಎಂದು ಹೇಳುವುದನ್ನು ಕೇಳಿದ್ದೀರಾ?!
ಘಟನೆ-2
ಆ ದಿನ 1965, ಆಗಸ್ಟ್ 31. ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮಧ್ಯಾಹ್ನದ ಊಟಕ್ಕೆಂದು ಬಂದಿದ್ದರು. ಇನ್ನೇನು ತಿನ್ನಲು ಆರಂಭಿಸಬೇಕು, ಅಷ್ಟರಲ್ಲಿ ಬಳಿಗೆ ಬಂದ ಅಪ್ತ ಕಾರ್ಯದರ್ಶಿ ಕಿವಿಯಲ್ಲೇನೋ ಉಸುರಿದರು. ಊಟ ಮರೆತ ಶಾಸ್ತ್ರೀಜಿ,  “10 ಜನಪಥ್್’ನಲ್ಲಿರುವ ಪ್ರಧಾನಿ ಕಚೇರಿಯತ್ತ ಧಾವಿಸಿದರು. ಅಲ್ಲಿ ಭೂಸೇನೆ, ನೌಕಾ ದಳ ಹಾಗೂ ವಾಯುಪಡೆಯ ಮುಖ್ಯಸ್ಥರು ಪ್ರಧಾನಿಗಾಗಿ ಕಾದಿದ್ದರು. ಏನಾಗುತ್ತಿದೆ ಎಂದು ಎಲ್ಲರೂ ಯೋಚಿಸುವಷ್ಟರಲ್ಲಿ, ಅಂದರೆ ಐದೇ ನಿಮಿಷದಲ್ಲಿ ಸಭೆ ಮುಗಿಯಿತು.  “ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ’ ಎಂದು ಹದಿನೈದು ದಿನಗಳ ಹಿಂದಷ್ಟೇ ಕೆಂಪುಕೋಟೆಯ ಮೇಲೆ ಗುಡುಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ, ಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಮೇಲೆ ಯುದ್ಧ ಘೋಷಣೆ ಮಾಡಿದ್ದರು! ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿದೊಡ್ಡ ಸಂಘರ್ಷ ಅದಾಗಿತ್ತು. ಭಾರತೀಯ ಸೇನೆ ಲಾಹೋರ್ ಸಮೀಪಕ್ಕೆ ತಲುಪಿತು. ಪಾಕ್ ಪರ ರಣರಂಗಕ್ಕಿಳಿಯುವುದಾಗಿ ಚೀನಾ ಬೆದರಿಕೆ ಹಾಕಿದರೂ ಶಾಸ್ತ್ರೀಜಿ ಬಗ್ಗಲಿಲ್ಲ. 1948ರಲ್ಲಿ ಪಾಕ್ ದಾಳಿ ಮಾಡಿದಾಗ ರಣಹೇಡಿ ನೆಹರು ವಿಶ್ವಸಂಸ್ಥೆಯ ಕದತಟ್ಟಿದರೆ, 1965ರಲ್ಲಿ ವಿಶ್ವಸಂಸ್ಥೆಯೇ ಓಡಿಬರುವಂತೆ ಮಾಡಿದರು ಶಾಸ್ತ್ರೀಜಿ! 1962ರಲ್ಲಿ ಚೀನಾ ಎದುರು ಉಂಟಾದ ಸೋಲು ಇಡೀ ದೇಶದ ಅತ್ಮಸ್ಥೈರ್ಯವನ್ನು ಉಡುಗಿಸಿದರೆ 1965ರಲ್ಲಿ ಗೆಲುವು ತಂದುಕೊಡುವ ಮೂಲಕ ಭಾರತೀಯರು ಮತ್ತೆ ಎದೆಯುಬ್ಬಿಸಿ ನಡೆಯುವಂತೆ ಮಾಡಿದರು ಶಾಸ್ತ್ರೀಜಿ. ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ 17 ವರ್ಷ ಪ್ರಧಾನಿಯಾಗಿದ್ದ ನೆಹರು ಅವರನ್ನು ಧೈರ್ಯ, ಛಲ, ಜನಪ್ರಿಯತೆ ಎಲ್ಲದರಲ್ಲೂ ಮೀರಿಸಿದರು. ಅದು ಕಾಂಗ್ರೆಸ್್ನಲ್ಲಿದ್ದ ನೆಹರು ಪುತ್ರಿ ಇಂದಿರಾ ಗಾಂಧಿಗಾಗಲಿ, ನೆಹರು ಕುಂಟುಂಬದ ಭಟ್ಟಂಗಿಗಳಿಗಾಗಲಿ ಪಥ್ಯವಾಗಲಿಲ್ಲ.
1966, ಜನವರಿ 11ರ ರಾತ್ರಿ.
ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ತಾಷ್ಕೆಂಟ್್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದರು. ನೀಲಿಗಟ್ಟಿದ ದೇಹ ಭಾರತಕ್ಕೆ ಬಂತು. ಒಂದೆಡೆ ಇಡೀ ದೇಶವೇ ದುಃಖದ ಮಡುವಿಗೆ ಬಿದ್ದಿದ್ದರೆ ಇನ್ನೊಂದೆಡೆ ನೆಹರು ಕುಟುಂಬದ ಭಟ್ಟಂಗಿಗಳು ಶವಪರೀಕ್ಷೆಯನ್ನೂ ಮಾಡಲು ಬಿಡದೆ ಶಾಸ್ತ್ರೀಜಿಯವರನ್ನು ಇತಿಹಾಸದ ಕಸದಬುಟ್ಟಿಗೆ ದೂಡುವ ಪಿತೂರಿ ನಡೆಸುತ್ತಿದ್ದರು. ಗಾಂಧೀಜಿ, ನೆಹರು ಅವರನ್ನು ಅಂತ್ಯಸಂಸ್ಕಾರ ಮಾಡಿದ್ದ ಸ್ಥಳದಲ್ಲೇ ಶಾಸ್ತ್ರೀಜಿಯವರ ಕೊನೆಯ ವಿಧಿ-ವಿಧಾನಗಳನ್ನು ನೆರವೇರಿಸಲು ಕಾಂಗ್ರೆಸ್ಸಿಗರೇ ವಿರೋಧ ವ್ಯಕ್ತಪಡಿಸಿದರು. ಅವರ ದೇಹವನ್ನು ಅಲಹಾಬಾದ್್ಗೆ ಕೊಂಡೊಯ್ಯುವಂತೆ ಸೂಚಿಸಿದರು. ಇಂತಹ ಧೂರ್ತತನವನ್ನು ಜನರ ಮುಂದಿಡುವುದಾಗಿ ಅವರ ಪತ್ನಿ ಲಲಿತಾ ಶಾಸ್ತ್ರಿ ಬೆದರಿಕೆ ಹಾಕಿದಾಗ ದೆಹಲಿಯಲ್ಲೇ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಲಾಯಿತು. ಅವರ ಸಮಾಧಿಯ ಮೇಲೆ  “ಜೈ ಜವಾನ್, ಜೈ ಕಿಸಾನ್್’ ಎಂದು ಕೆತ್ತುವುದಕ್ಕೂ ಅಡ್ಡಿಪಡಿಸಿದರು. ಲಲಿತಾ ಶಾಸ್ತ್ರಿಯವರು ಉಪವಾಸ ಕೂರುವುದಾಗಿ ಮತ್ತೆ ಧಮಕಿ ಹಾಕಬೇಕಾಗಿ ಬಂತು. ದುಃಖದಿಂದ ಹೊರಬರುವ ಮೊದಲೇ ಕಾಂಗ್ರೆಸ್ ಕಚೇರಿಯಿಂದ ಶಾಸ್ತ್ರೀಜಿಯವರ ಭಾವಚಿತ್ರವನ್ನು ಕಿತ್ತೊಗೆಯಲಾಗಿತ್ತು. ಲಾಲ್ ಬಹಾದ್ದೂರ್ ಶಾಸ್ತ್ರಿ ಬಗ್ಗೆ ನೆಹರುಗೆ ಎಷ್ಟು ಮತ್ಸರವಿತ್ತೆಂದರೆ ಸ್ವಾತಂತ್ರ್ಯಾನಂತರ ರಚನೆಯಾದ ಹಂಗಾಮಿ ಕೇಂದ್ರ ಸಂಪುಟಕ್ಕೆ ಶಾಸ್ತ್ರಿಯವರನ್ನು ತೆಗೆದುಕೊಂಡರೂ ಖಾತೆ ರಹಿತ ಮಂತ್ರಿಯನ್ನಾಗಿಸಿದ್ದರು. 1963ರಲ್ಲಿ ನೆಹರು ತಮ್ಮ ಸಂಪುಟದಿಂದ ಕೈಬಿಟ್ಟಾಗ ಶಾಸ್ತ್ರೀಜಿ ಪತ್ರಿಕೆಗಳಿಗೆ ಅಂಕಣ ಬರೆದು ಹೊಟ್ಟೆಹೊರೆಯಬೇಕಾಯಿತು. ಕಾಂಗ್ರೆಸ್ ಶಾಸ್ತ್ರೀಜಿ ಬಗ್ಗೆ ಎಂತಹ ಧೋರಣೆ ಅನುಸರಿಸುತ್ತಾ ಬಂದಿದೆ ಎಂದರೆ ಶಾಸ್ತ್ರೀಜಿ ಜನ್ಮದಿನ ಕೂಡ ಅಕ್ಟೋಬರ್ 2ರಂದೇ ಎಂಬುದು ಎಷ್ಟು ಮಕ್ಕಳಿಗೆ ಗೊತ್ತು? 2004ರಲ್ಲಿ ಶಾಸ್ತ್ರೀಜಿಯವರ ಜನ್ಮಶತಮಾನೋತ್ಸವದ ಬಗ್ಗೆ ಕಾಂಗ್ರೆಸ್ ಯಾವ ಅಸಕ್ತಿಯನ್ನೂ ತೋರದಿದ್ದಾಗ, ಅವರ ಮಕ್ಕಳಾದ ಅನಿಲ್ ಹಾಗೂ ಸುನೀಲ್ ಶಾಸ್ತ್ರಿ ಸಾರ್ವಜನಿಕವಾಗಿ ಟೀಕಿಸಿದ್ದರು. ಹೀಗೆ ಈ ದೇಶದ ಧೀರ ಪುತ್ರನನ್ನೇ ಸಹಿಸಲಿಲ್ಲ ಕಾಂಗ್ರೆಸ್.
ಘಟನೆ-3
1991, ಜೂನ್ 21. ರಾಜಕೀಯ ನಿವೃತ್ತಿ ಯಾಚಿಸಿದ್ದ ಪಾಮುಲಪರ್ತಿ ವೆಂಕಟ ನರಸಿಂಹರಾವ್, ಅಂದು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಹಾಗಂತ ಖುಷಿಪಡುವ ಸ್ಥಿತಿಯಲ್ಲಿರಲಿಲ್ಲ. ಹಣದುಬ್ಬರ ಶೇ. 17ಕ್ಕೇರಿತ್ತು. ಸಾಲ 90 ಶತಕೋಟಿ ಪೌಂಡ್್ಗೇರಿತ್ತು. 100 ಕೋಟಿ ಸಾಲ ಕೊಡುವುದಕ್ಕೂ ವಿಶ್ವಬ್ಯಾಂಕ್ ಹಾಗೂ ಎಡಿಬಿ ಸಿದ್ಧವಿರಲಿಲ್ಲ. ಹಿಂದಿನ ಪ್ರಧಾನಿ ಚಂದ್ರಶೇಖರ್ ಚಿನ್ನವನ್ನು ಅಡವಿಟ್ಟಿದ್ದರು. ಭಾರತ ಡಿಫಾಲ್ಟರ್ ಆಗುವುದು ಖಚಿತವಾಗಿತ್ತು. ದಿವಾಳಿಯಾಗುವುದೆಂದರೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ, ಪುರಾತನ ನಾಗರಿಕತೆ ಎಂಬ ಘನತೆ, ಹೆಗ್ಗಳಿಕೆ ಮಣ್ಣು ಪಾಲಾದಂತೆ. ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳೆಂಬ ಬಿಳಿ ಆನೆಗಳು, ಪರಮ ಭ್ರಷ್ಟ ನೌಕರಶಾಹಿಯಿಂದಾಗಿ ದೇಶ ಹೀನಾಯ ಸ್ಥಿತಿಗೆ ತಲುಪಿತ್ತು. ಇಂತಹ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಪ್ರಾಧಾನಿಯಾಗಿ ನೆಹರು ಪ್ರಣೀತ ಅರೆ ಸಮಾಜವಾದವನ್ನು (Quasi Socialism) ತಿಪ್ಪೆಗೆ ಎಸೆಯುವುದು, ಇಂದಿರಾ ಗಾಂಧಿ ಹುಟ್ಟು ಹಾಕಿದ್ದ  “ಬಾಬು ಸಂಸ್ಕೃತಿ’, ಇನ್್ಸ್ಪೆಕ್ಟರ್ ರಾಜ್, ಪರ್ಮಿಟ್ ರಾಜ್, ಲೈಸೆನ್ಸ್ ರಾಜ್್ಗಳಿಗೆ ತಿಲಾಂಜಲಿ ಹಾಕುವುದು ಸಾಮಾನ್ಯ ವಿಷಯವಾಗಿರಲಿಲ್ಲ. ಅದರೂ ಧೈರ್ಯ ತೋರಿ ಆರ್ಥಿಕ ಉದಾರೀಕರಣ ನೀತಿಗಳನ್ನು ಜಾರಿಗೆ ತಂದವರು ನರಸಿಂಹರಾವ್. ಇವತ್ತು ಪ್ಲಾಸ್ಟಿಕ್ ಮನಿ, High End Technology, ಬಗೆ ಬಗೆಯ ಕಾರು, ಕೈಗೆಟುಕುವ ಬೆಲೆಯಲ್ಲಿ ಟಿವಿ, ಫ್ರಿಜ್, ಬ್ಯಾಂಕಿಂಗ್, ಇಂಟರ್್ನೆಟ್ ಸೇವೆ ಲಭ್ಯವಾಗಿದ್ದರೆ ಅದಕ್ಕೆ ನರಸಿಂಹರಾವ್ ಕಾರಣ. ಅವರನ್ನು ಸುಧಾರಣಾವಾದಿ, ವಿದ್ವಾಂಸ, ವಿಧ್ವಂಸಕ ಏನು ಬೇಕಾದರೂ ಕರೆಯಿರಿ. ಲಕೂಭಾಯಿ ಪಾಠಕ್, ಸೈಂಟ್ ಕೀಟ್ಸ್, ಜೆಎಂಎಂ ಹಗರಣಗಳನ್ನಿಟ್ಟುಕೊಂಡು ಜರೆಯಿರಿ. ಅದರೆ ಭಾರತ ಇವತ್ತು ಚೀನಾಕ್ಕೆ ಸಡ್ಡು ಹೊಡೆಯುವಂತೆ ಬೆಳೆದಿದ್ದರೆ ಅದರ ಹಿಂದೆ ನರಸಿಂಹ ರಾವ್ ಪರಿಶ್ರಮ, ದೂರದೃಷ್ಟಿಯಿದೆ. ಇನ್ನು 1993ರಲ್ಲಿ ಸಂಭವಿಸಿದ ಭೀಕರ ಲಾತೂರ್ ಭೂಕಂಪವನ್ನು ನಿಭಾಯಿಸಿದ ರೀತಿಯನ್ನು ಮರೆಯಲು ಸಾಧ್ಯವೆ?
ಇಂತಹ ನರಸಿಂಹರಾವ್ 2004, ಡಿಸೆಂಬರ್ 23ರಂದು ರಾಜಧಾನಿ ದೆಹಲಿಯಲ್ಲಿ ಅಗಲಿದಾಗ ಕಾಂಗ್ರೆಸ್ ಮಾಡಿದ್ದೇನು ಗೊತ್ತೆ?
ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಿಡಲು ಎಐಐಸಿ ಕಚೇರಿಯ ಒಳಕ್ಕೆ ಕೊಂಡೊಯ್ಯುವುದಕ್ಕೂ ಅವಕಾಶ ನೀಡಲಿಲ್ಲ, ಗೇಟನ್ನೇ ಮುಚ್ಚಿ ಬಿಟ್ಟರು! ಕನಿಷ್ಠ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲೇ ಜಾಗ ಕೊಡಿ ಎಂಬ ರಾವ್ ಕುಟುಂಬದ ಮನವಿಗೂ ಸೋನಿಯಾ ಗಾಂಧಿ ಸೊಪ್ಪು ಹಾಕಲಿಲ್ಲ. ಕೊನೆಗೆ ಹೈದರಾಬಾದ್್ನಲ್ಲಿ ನಡೆದ ಅಂತ್ಯ ಸಂಸ್ಕಾರಕ್ಕೆ ಎಚ್.ಡಿ. ದೇವೇಗೌಡ, ಲಾಲ್್ಕೃಷ್ಣ ಆಡ್ವಾಣಿಯವರಂಥ ವಿರೋಧ ಪಕ್ಷದ ನಾಯಕರು ಆಗಮಿಸಿದರಾದರೂ ಸೋನಿಯಾ ಗಾಂಧಿ ಅಂತಹ ಸೌಜನ್ಯ ತೋರಲಿಲ್ಲ. ಕಳೆದ ವರ್ಷ ನಡೆದ ಕಾಂಗ್ರೆಸ್್ನ 125ನೇ ಜಯಂತಿ ವೇಳೆ ಮಾಡಿದ 15 ನಿಮಿಷಗಳ ಭಾಷಣದಲ್ಲಿ ಕಾಂಗ್ರೆಸ್್ನ ಎಲ್ಲ ಪ್ರಧಾನಿಗಳ ಹೆಸರನ್ನೂ ಉಲ್ಲೇಖಿಸಿದ ಸೋನಿಯಾ, “Rajiv Gandhi scripted the course of Economic policies that were followed by the government (headed by Rao) for the following five years” ಎಂದರೇ ಹೊರತು ರಾವ್ ಅವರ ಸಣ್ಣ ಪ್ರಸ್ತಾಪವನ್ನೂ ಮಾಡಲಿಲ್ಲ. ಆರ್ಥಿಕ ಉದಾರೀಕರಣದ ರೂವಾರಿ ರಾವ್ ಅವರಾಗಿದ್ದರೂ ರಾಜೀವ್್ಗೆ ಕ್ರೆಡಿಟ್ ಕೊಡಲು ಪ್ರಯತ್ನಿಸಿದರು. ಕಾಂಗ್ರೆಸ್್ನ ಇಂತಹ ಧೋರಣೆಯ ಬಗ್ಗೆ ಬರೆಯುತ್ತಾ ಖ್ಯಾತ ಇತಿಹಾಸಜ್ಞ ರಾಮಚಂದ್ರ ಗುಹಾ ಹೀಗೆನ್ನುತ್ತಾರೆ-  ”To forget his achievements, but to remember his mistakes, is a product of cold and deliberate calculation”.
ಇಷ್ಟು ಮಾತ್ರವಲ್ಲ, ಸೀಟು ಬಿಡಲೊಪ್ಪದ ಕಾಂಗ್ರೆಸ್ ಅಧ್ಯಕ್ಷ ಸೀತಾರಾಮ್ ಕೇಸರಿಯವರನ್ನು 1998ರಲ್ಲಿ ಪದಚ್ಯುತಗೊಳಿಸಿ ಸೋನಿಯಾ ಗಾಂಧಿಯವರನ್ನು ಆ ಸ್ಥಾನಕ್ಕೆ ನೇಮಕ ಮಾಡಿದ ಅಕೆಯ ಬೆಂಬಲಿಗ ಗೂಂಡಾಗಳು ಕೇಸರಿಯವರನ್ನು ಎಐಸಿಸಿ ಕಚೇರಿಯಿಂದ ಎತ್ತಿ ಆಚೆ ಹಾಕಿದ್ದರು. ಜವಾಹರಲಾಲ್ ನೆಹರು ಕುಟುಂಬದ ಬುದ್ಧಿಯೇ ಅಂಥದ್ದು, ತನಗಿಂತ ಪ್ರಸಿದ್ಧರಾಗುವುದನ್ನು ಅದು ಸಹಿಸುವುದೇ ಇಲ್ಲ. ಸ್ವಾತಂತ್ರ್ಯ ಬಂದ ತರುವಾಯ ರಚನೆಯಾದ ಸರಕಾರದಲ್ಲಿ ಅಂತಹ ಅಂಬೇಡ್ಕರ್ ಅವರನ್ನೇ ಮಂತ್ರಿ ಮಾಡುವುದಕ್ಕೆ ನೆಹರು ಸಿದ್ಧರಿರಲಿಲ್ಲ. 1951-52ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯನ್ನು ನಿಲ್ಲಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಕಾಂಗ್ರೆಸ್. ಹಾಗಿರುವಾಗ ಏಕಾಏಕಿ ಬಂದು ಇಡೀ ರಾಷ್ಟ್ರದ ಮೆಚ್ಚುಗೆಗೆ ಪಾತ್ರರಾಗಿರುವ ಅಮಾಯಕ ಅಣ್ಣಾ ಹಜಾರೆಯವರನ್ನು ಸೋನಿಯಾ ಗಾಂಧಿಯವರ ಚೇಲಾಗಳು ಬಿಡುತ್ತಾರೆಯೇ? ಈ ದೇಶದ ಧೀರ ಪುತ್ರರಾದ ಸುಭಾಷ್್ಚಂದ್ರ ಬೋಸ್, ಅಂಬೇಡ್ಕರ್, ಸರ್ದಾರ್ ಪಟೇಲ್, ಲಾಲ್ ಬಹಾದ್ದೂರ್ ಶಾಸ್ತ್ರಿಯವರನ್ನೇ ಹೊಸಕಿಹಾಕಲು ಪ್ರಯತ್ನಿಸಿದ ನೆಹರು ಕುಟುಂಬ ಅಣ್ಣಾನ ಯಶಸ್ಸನ್ನು ಸಹಿಸಿಕೊಂಡೀತೆ? ಈಗಾಗಲೇ ಅದರ ಎಲ್ಲ ಸೂಚನೆಗಳೂ ಕಾಣುತ್ತಿವೆ.
Beware of dogs !
ಇಂತಹ ಎಚ್ಚರಿಕೆಯ ಫಲಕಗಳನ್ನು ಶ್ರೀಮಂತರ ಮನೆ ಮುಂದೆ ಕಾಣಬಹುದು. ಕಪಿಲ್ ಸಿಬಲ್, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ಮನೀಶ್ ತಿವಾರಿಗಳಿರುವವರೆಗೂ ಸೋನಿಯಾ ಗಾಂಧಿಯವರಿಗೆ ಅಂತಹ ಅಗತ್ಯವೇ ಎದುರಾಗುವುದಿಲ್ಲ! ಇವರು ವರ್ತಿಸುತ್ತಿರುವ ರೀತಿಯನ್ನು ನೋಡಿದರೆ ಸೋನಿಯಾ ಮನೆ ಮುಂದೆ “Beware of Sibal, Moily, Digvijay singh and Tiwari”ಎಂದು ಹಾಕಬೇಕೇನೋ ಎಂದನಿಸುತ್ತಿದೆ. ಇವರೇನು ಸಚಿವ ಮಹಾಶಯರೋ ಅಥವಾ ಸೋನಿಯಾ ಗಾಂಧಿಯವರ ಸಾಕು ಪ್ರಾಣಿಗಳೋ? ಲೋಕಾಯುಕ್ತ ಸಂತೋಷ್ ಹೆಗ್ಡೆಯವರ ಕ್ಷಮತೆ ಬಗ್ಗೆ ಪ್ರಶ್ನಿಸುತ್ತಿರುವ ಈ ದಿಗ್ವಿಜಯ್ ಸಿಂಗ್್ಗೇನಾದರೂ ಮತಿಭ್ರಮಣೆಯಾಗಿದೆಯೇ?
“ನಿಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಯೊಬ್ಬರು ಒಂದರ ಹಿಂದೆ ಒಂದು ಹೇಳಿಕೆ ನೀಡುತ್ತಿದ್ದಾರೆ. ಆತನಿಗೆ ಕಾಂಗ್ರೆಸ್್ನ ಬೆಂಬಲವಿದೆ ಎಂದೇ ನಾನು ಭಾವಿಸುತ್ತೇನೆ. ಬಹಳಷ್ಟು ಹೇಳಿಕೆಗಳು ಸತ್ಯಕ್ಕೆ ದೂರವಾದವು. ಆತನ ಉದ್ದೇಶ ಜನರಲ್ಲಿ ಗೊಂದಲ ಸೃಷ್ಟಿಸುವುದು, ದಾರಿತಪ್ಪಿಸುವುದು ಹಾಗೂ ಲೋಕಪಾಲ ಮಸೂದೆ ಸಂಬಂಧ ನಡೆಯುತ್ತಿರುವ ಪ್ರಕ್ರಿಯೆಯನ್ನು ಹಾಳುಗೆಡುವುದಾಗಿದೆ. ಇಂತಹ ಕೃತ್ಯಗಳಿಗೆ ನಿಮ್ಮ ವೈಯಕ್ತಿಕ ಒಪ್ಪಿಗೆ ಇದೆಯೇ?” ಎಂದು ಏಪ್ರಿಲ್ 18ರಂದು ಸೋನಿಯಾ ಗಾಂಧಿಯವರಿಗೆ ಬರೆದಿರುವ ಪತ್ರದಲ್ಲಿ ಅಣ್ಣಾ ಹಜಾರೆ ಬಹಳ ಮುಗ್ಧವಾಗಿ  ಕೇಳಿದ್ದಾರೆ. ಇದನ್ನೆಲ್ಲಾ ಮಾಡಿಸುತ್ತಿರುವುದೇ ಸೋನಿಯಾ ಗಾಂಧಿ ಎಂಬುದು ಎಂತಹ ಕಟುವಾಸ್ತವ ಅಲ್ಲವೇ?
ಛೇ!

ಸೋಮವಾರ, ಆಗಸ್ಟ್ 15, 2011

ಬ್ರಿಟೀಷರ ಕಾಲದಲ್ಲಿ ಸತ್ಯಾಗ್ರಹಿಗಳ ಬಂಧನ ಓಕೆ ಆದರೆ ಇಂದು?




ಇಂದು ಬೆಳಗ್ಗೆ ಗಾಂಧಿವಾದಿ ಅಣ್ಣಾ ಹಜಾರೆ ಜೆಪಿ ಪಾರ್ಕ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಆದರೆ ದೆಹಲಿ ಪೊಲೀಸ್ ನಿರಶನ ಆರಂಭಕ್ಕೂ ಮುನ್ನ ಅಣ್ಣಾ ಅವರನ್ನು ಬಂಧಿಸಿದ್ದಾರೆ. ಜತೆಯಲ್ಲಿ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾ ಹಜಾರೆ ತಂಡದ ಸದಸ್ಯೆ ಕಿರಣ್ ಬೇಡಿ, ಶಾಂತಿ ಭೂಷಣ್,  ಅರವಿಂದ್ ಕೇಜ್ರಿವಾಲ್  ಹಾಗು ನೂರಾರು ಕಾರ್ಯಕರ್ತರನ್ನು ಕೂಡಾ ಬಂಧಿಸಲಾಗಿದೆ.
ಕೆಲ ಕೇಂದ್ರ ಮಂತ್ರಿಗಳು, ಕಾಂಗ್ರೆಸ್ಸಿನ ಅಧಿಕೃತ ವಕ್ತಾರರು ಹಾಗು ಪ್ರಧಾನ ಕಾರ್ಯದರ್ಶಿಗಳು ಹೇಗೆಗೆಲ್ಲ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದು ನಾವೆಲ್ಲ ಗಮನಿಸಿದ್ದೇವೆ. ಮೊದಲಿನೊಂದಲೂ ಸತ್ಯಾಗ್ರಹವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಯುತಿತ್ತು. ಇಂದು ಆರಂಭವಾಗುವ ಮುನ್ನವೇ ಬಂಧಿಸಿರುವುದು ನಮ್ಮೆಲ್ಲರ ಆಕೋಶಕ್ಕೆ ಗುರಿಯಾಗಿದ್ದಾರೆ. ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಸಂತೋಷ ಪಟ್ಟಿದ್ದೆವು, ಆದರೆ ಇಂದಿನ ಘಟನೆ ಆ ಸಂತೋಷವನ್ನು ಕಿತ್ತು ಕೊಂಡಿದೆ.
ಬ್ರಿಟೀಷರ ದಾಸ್ಯದಿಂದ ಹೊರಬರಲು ಲಕ್ಷಾಂತರ ಜನರು ಪ್ರಾಣತ್ಯಾಗ ಮಾಡಿದ್ದರು ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಲಭ್ಯವಾಗದ ಹಾಗೆ ಮಾಡಿ ಕೇವಲ ಕಾಂಗ್ರೆಸ್ಸಿನ ಕೆಲ ಮುಖಂಡರುಗಳಿಗೆ ಜೈಕಾರ ಹಾಕುವ ರೀತಿಯಲ್ಲಿ ಪಠ್ಯ ಪುಸ್ತಕವನ್ನು ರೂಪಿಸಿ ಜನರನ್ನು ದಾರಿತಪ್ಪಿಸಿದ್ದೇ ಅಲ್ಲದೆ ಅಧಿಕಾರ ಮದದಿಂದ ಭ್ರಷ್ಟಚಾರ ದಲ್ಲಿ ತೊಡಗಿರುವ ಪ್ರತಿಯೊಬ್ಬರನ್ನು ಮಟ್ಟ ಹಾಕಲು ಪ್ರಬಲವಾದ ಕಾನೂನನ್ನು ರೂಪಿಸಬೇಕು ಎಂದು ಹೋರಾಡುತ್ತಿರುವ ಅಣ್ಣಾ ಹಜಾರೆ ಯ ಸತ್ಯಾಗ್ರಹವನ್ನು ಹತ್ತಿಕ್ಕುವುದಕ್ಕೆ ಶ್ರಮಿಸುತ್ತಿರುವ ಇವರಿಗೆ ಏನನ್ನಬೇಕು.?
ಧಿಕ್ಕಾರವಿರಲಿ ಇಂತಹಜನರಿಗೆ.
 ದಯಮಾಡಿ ಯಾರು ಜಾತಿ, ಧರ್ಮ, ಪಕ್ಷನಿಷ್ಟೆ ಹಾಗೂ ವ್ಯಕ್ತಿ ನಿಷ್ಟೆಗೆ ಬಲಿಯಾಗದೆ, ಭ್ರಷ್ಟಾಚಾರದಲ್ಲಿ ತೊಡಗಿರುವ ಯಾವುದೇ ಪಕ್ಷ ಹಾಗು ವ್ಯಕ್ತಿಗಳಿಗೆ ಚುನಾವಣೆಗಳಲ್ಲಿ ಸರಿಯಾದ ಪಾಠಕಲಿಸಬೇಕು.
ಏನಂತೀರಾ?

ಭಾನುವಾರ, ಆಗಸ್ಟ್ 14, 2011

ಸರ್ವರಿಗೂ ಸ್ವಾತಂತ್ರ ದಿನೋತ್ಸವದ ಶುಭಾಶಯಗಳು

ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯಕ್ಕೆ ಕಾರಣೀಭೂತರಾದ ಪ್ರತಿಯೊಬ್ಬ ಹಿರಿಯರಿಗೆ ನಮ್ಮ  ನಮನಗಳು.

ಸರ್ವರಿಗೂ ಸ್ವಾತಂತ್ರ ದಿನೋತ್ಸವದ ಶುಭಾಶಯಗಳು

ವಂದೇ ಮಾತರಂ. 

ಜೈ ಹಿಂದ್





ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ


ಶುಕ್ರವಾರ, ಆಗಸ್ಟ್ 12, 2011

"ಉರುಮಿ"

ಗೆಣಸ್ಲೆ ಬ್ಲಾಗಿನ ಸಚಿನ್ ಭಟ್ ಬರೆದಿರುವ ಲೇಖನ.

ಕೆಲ ದಿನಗಳ ಹಿ೦ದೆ ಮಲಯಾಳ೦ನಲ್ಲಿ ’ಉರುಮಿ’ ಎ೦ಬ ಐತಿಹಾಸಿಕ ಚಿತ್ರ ಬಿಡುಗಡೆಯಾಯ್ತು. ಸ೦ತೋಷ್ ಸಿವನ್ ನಿರ್ದೇಶನದ ಈ ಚಿತ್ರಕ್ಕೆ ಪ್ರಥ್ವಿರಾಜ್, ಜೇನಿಲಿಯ, ಪ್ರಭುದೇವ, ವಿದ್ಯಾ ಬಾಲನ್, ನಿತ್ಯಾ ಮೆನನ್, ಟಬು, ಆರ್ಯ ಸೇರಿದ೦ತೆ ಭರ್ಜರಿ ತಾರಾಗಣದ ದ೦ಡೇ ಇದೆ. ಇದರ ಬಗ್ಗೆ ನನಗೂ ಸಿಕ್ಕಾಪಟ್ಟೆ ನಿರೀಕ್ಷೆ ಇತ್ತು. ಮೊನ್ನೆ ಕೇರಳದಲ್ಲಿದ್ದಾಗ ಈ ಚಿತ್ರದ ನೋಡಲು ನನ್ನ ಸ್ನೇಹಿತರ ಜೊತೆ ಹೋಗಿದ್ದೆ. ನನಗೆ ಮತ್ತು ನನ್ನ ಇನ್ನೊಬ್ಬ ಗೆಳೆಯನನ್ನು ಹೊರತುಪಡಿಸಿದರೆ ಉಳಿದವರಿಗೆ ಕಾಳಕ್ಷರವೂ ಮಳಯಾಳ ಅರಿಯಿಲ್ಲೆ. ಆದರೂ ಕೇವಲ ನನ್ನ ಮೇಲಿನ ಪ್ರೀತಿಯಿ೦ದಲೇ ಬ೦ದವರಾಗಿದ್ದರೂ ಎಲ್ಲರಿಗೂ ಚಿತ್ರ ಸಿಕ್ಕಾಪಟ್ಟೆ ಇಷ್ಟವಾಯ್ತು. ಇಷ್ಟೆಲ್ಲ ಪೀಠಿಕೆಗಳ ನ೦ತರ ನಾನೀಗ ಹೇಳಬೇಕೆ೦ದುಕೊ೦ಡಿರುವುದು ಆ ’ಉರುಮಿ’ ಚಿತ್ರದ ಕಥೆಯ ಪ್ರಧಾನ ಪಾತ್ರಧಾರಿ ವಾಸ್ಕೊ-ಡ-ಗಾಮನ ಬಗ್ಗೆಯೇ.


           ಶಾಲೆಯಲ್ಲಿ ಓದುವ ಯಾವುದೇ ಮಕ್ಕಳನ್ನು ಕೇಳಿ ನೋಡಿ: ಭಾರತ ವನ್ನು ಕ೦ಡುಹಿಡಿದವರು ಯಾರೆ೦ದು. ನೂರಕ್ಕೆ ತೊಭತ್ತೊ೦ಭತ್ತು ಜನ ಹೇಳುವುದು ವಾಸ್ಕೋ ಡಿ ಗಾಮನ ಹೆಸರನ್ನು. ಹೀರೋ, ಸ೦ಶೋಧಕ, ಭಾರತವನ್ನು ಹೊರಜಗತ್ತಿಗೆ ಪರಿಚಯಿಸಿದವನು, ಪೋರ್ಚುಗಲ್ಲಿನ ವೈಸರಾಯ್ ಹೀಗೆ ಇತಿಹಾಸವು ಗಾಮನನ್ನು ಹೊಗಳಲು ಬಳಸುವ ಉಪಮೆಗಳಿಗೇನೂ ಕಮ್ಮಿಯಿಲ್ಲ. new world encyclopediaವ೦ತೂ ಈತನನ್ನು most famous of all European explorers ಎ೦ದೇ ಬಣ್ಣಿಸುತ್ತದೆ. ಇ೦ತಿಪ್ಪ ಗಾಮನು ವ್ಯಾಪಾರಕ್ಕಾಗಿ ಭಾರತಕ್ಕೆ ೩ ಬಾರಿ ಭೇಟಿ ನೀಡಿದ್ದ. ಅದು ಭಾರತದಲ್ಲಿ ಸಾಮ್ರಾಜ್ಯ ಸ್ಥಾಪಿಸಿ ಇಲ್ಲಿನ ಅಪಾರ ಸ೦ಪತ್ತನ್ನು ಲೂಟಿ ಹೊಡೆಯುವುದಕ್ಕೆ ಎ೦ದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಮೇ ೨೦, ೧೪೯೮ರಲ್ಲಿ ಸಾವೋ ಗ್ಯಾಬ್ರಿಯಲ್. ಸಾವೋ ರಫೀಲ್, ಬೆರ್ರಿಯೊ ಎ೦ಬ ೩ ಹಡಗುಗಳು ಮತ್ತು ಸುಮಾರು ೧೭೦ ಜನರೊಡನೆ ಮೊದಲ ಬಾರಿ ಕೇರಳದ ಕಲ್ಲೀಕೋಟೆಗೆ ಬ೦ದಿಳಿದಾಗ ಅಲ್ಲಿನ ಸಾಗರೋತ್ತರ ವ್ಯಾಪಾರದ ಬಹುಪಾಲು ಅರಬ್ಬಿನ ಮುಸ್ಲೀಮರ ಕೈಯ್ಯಲ್ಲಿತ್ತು.  ಮುಸ್ಲೀಮರನ್ನು ವ್ಯಾಪಾರದಿ೦ದ ದೂರವಿಡುವ೦ತೆ ಇಲ್ಲಿನ ರಾಜನ ಮನವೊಲಿಸಲು ಪ್ರಯತ್ನಿಸಿದಾಗ, ಸಹಜ ಸೆಕ್ಯುಲರ್ ನಾಡಾಗಿದ್ದ ಕೇರಳದಲ್ಲಿ ಇವನ ಮಾತಿಗೆ ಬೆಲೆ ಸಿಗಲಿಲ್ಲ. ಬ೦ದ ದಾರಿಗೆ ಸು೦ಕವಿಲ್ಲವೆ೦ಬ೦ತೆ ತನ್ನ ಕೆಲ ಸಹಾಯಕರನ್ನು ವ್ಯಾಪಾರಕ್ಕಾಗಿ ಇಲ್ಲೇ ಬಿಟ್ಟು ಎರಡನೇ ದರ್ಜೆಯ ಕಾಳುಮೆಣಸುಗಳೊ೦ದಿಗೆ ಪುನಃ ತನ್ನ ದೇಶಕ್ಕೆ ಮರಳುತ್ತಾನೆ ಗಾಮ.
          ಈತ ಎರಡನೇ ಬಾರಿ ೨೦ ಸುಸಜ್ಜಿತ ಯುದ್ಧನೌಕೆಗಳೊಡನೆ ಮತ್ತು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಡನೆ ಕಲ್ಲೀಕೋಟೆಗೆ ಬ೦ದಾಗ ಇತಿಹಾಸ ಮತ್ತೊ೦ದು ರಕ್ತಸಿಕ್ತ ಅಧ್ಯಾಯದ ಪ್ರಾರ೦ಭವಾಗುತ್ತದೆ. ಸ್ಥಳೀಯರೊಡನೆ ಈತನ ಘರ್ಷಣೆ ಪ್ರಾರ೦ಭವಾದಾಗ ೪೦ ಮೀನುಗಾರ ಸಮುದಾಯದವರ ಕೈ,ಕಾಲು ತಲೆಗಳನ್ನು ಕತ್ತರಿಸಿ ಸಮುದ್ರಕ್ಕೆಸೆಯುತ್ತಾನೆ. ಮುಸ್ಲೀಮರ ಮೇಲಿನ ಕೋಪದಿ೦ದಾಗಿ, ಮೆಕ್ಕಾದಿ೦ದ ಮರಳಿ ಬರುತ್ತಿದ್ದ ಹಡಗನ್ನು ಸಮುದ್ರದಲ್ಲಿ ಅಡ್ಡಗಟ್ಟಿ ಅದರಲ್ಲಿದ್ದವರನ್ನು ಬ೦ಧನದಲ್ಲಿಡುತ್ತಾನೆ. ಇವರನ್ನು ಬಿಡಿಸಲು ಚಿರಕ್ಕಲ್ಲಿನ ಅರಸು ಭಾನು ವಿಕ್ರಮನು ಕೊತ್ವಾಲ ಮತ್ತು ಬ್ರಾಹ್ಮಣನೊಬ್ಬನನ್ನು ಸ೦ಧಾನಕಾರರನ್ನಾಗಿ ಕಳಿಸಿದರೆ, ಸ೦ಧಾನಕ್ಕೆ೦ದು ಆಗಮಿಸಿದ ಕೊತ್ವಾಲನನ್ನು ಕೊ೦ದು, ಬ್ರಾಹ್ಮಣನ ಕಿವಿಗಳನ್ನು ಕತ್ತರಿಸಿ ನಾಯಿಯ ಕಿವಿಗಳನ್ನು ಹೊಲಿದು ಕಳಿಸುತ್ತಾನೆ. ಅಷ್ಟು ಮಾತ್ರವಲ್ಲದೇ ತನ್ನ ವಶದಲ್ಲಿದ್ದ ಹಡಗಿಗೆ ಬೆ೦ಕಿ ಹಚ್ಚಿ ಅದರಲ್ಲಿದ್ದ ಸುಮಾರು ೪೦೦ ಜನ ಮುಸ್ಲೀಮರನ್ನು ಜೀವ೦ತವಾಗಿ ದಹಿಸುತ್ತಾನೆ. ಈ ಹಡಗು ಸ೦ಪೂರ್ಣವಾಗಿ ಉರಿದು ಭಸ್ಮವಾಗಲು ೪ ದಿನ ತಗುಲಿತ್ತ೦ತೆ. ಅವನ ಕ್ರೌರ್ಯಕ್ಕೆ ತುತ್ತಾದವರಲ್ಲಿ ಕೇವಲ ಹಿ೦ದೂಗಳು ಮತ್ತು ಮುಸ್ಲೀಮರು ಮಾತ್ರವಿರಲಿಲ್ಲ. ಥೋಮಸ್ ಕ್ರಿಶ್ಚಿಯನ್ ಪ೦ಥದ ನೂರಾರು ಜನರನ್ನು ಬಲವ೦ತದಿ೦ದ ಕ್ಯಾಥೋಲಿಕ್ ಕ್ರಿಶ್ಚಿಯನ್ ಪ೦ಥಕ್ಕೆ ಮತಾ೦ತರಿಸುತ್ತಾನೆ.
       
 ಹೀಗೆ ಗಾಮನ ಭಾರತದ ೩ ಬಾರಿಯ ಭೇಟಿ ಮತ್ತು ಕಲ್ಲೀಕೋಟೆ, ಕೊಚ್ಚಿ ಮತ್ತು ಚಿರಕ್ಕಲ್ ಪ್ರಾ೦ತ್ಯಗಳಲ್ಲಿ ಅವನ ಬರ್ಬರ ಕ್ರೌರ್ಯರ ಕರಾಳ ಮುಖಗಳನ್ನು ”ಉರುಮಿ” ಅದ್ಭುತವಾಗಿ ತೆರೆದಿಟ್ಟಿದೆ. ”ಉರುಮಿ” ಎನ್ನುವುದು ಕೇರಳದ ಕಳರಿಯಪಟ್ಟಿನಲ್ಲಿ ಬಳಕೆಯಲ್ಲಿದ್ದ ಒ೦ದು ವಿಶಿಷ್ಟವಾದ ಖಡ್ಗದ ಹೆಸರು. ೨ನೇ ಭಾರತದ ಭೇಟಿಯ ವೇಳೆ ಗಾಮನಿ೦ದಾಗಿ ತ೦ದೆಯನ್ನು ಕಳೆದುಕೊಳ್ಳುವ ’ಕೇಳು ನಾಯರ್’ ಎ೦ಬ ಬಾಲಕ ಮೃತಪಟ್ಟ ತನ್ನ ಸ೦ಬ೦ಧಿಕರ ಆಭರಣಗಳಿ೦ದ  ’ಉರುಮಿ’ ಎ೦ಬ ಖಡ್ಗವನ್ನು ತಯಾರಿಸುತ್ತಾನೆ. ೧೫೨೪ರಲ್ಲಿ ೩ನೇ ಬಾರಿ ಕೇರಳಕ್ಕೆ ಬರುವ ಗಾಮ ಮತ್ತು ಅವನ ಮಗ ಅಸ್ಟೇವಾಯೋ ಡ ಗಾಮರ ವಿರುದ್ಧ ಕೇಳು ನಾಯರ್ ಊರವರನ್ನು ಎತ್ತಿ ಕಟ್ಟಿ ಅವನನ್ನು ಕೊಲ್ಲುವುದು ಚಿತ್ರದ ಒಟ್ಟಾರೆ ಕಥೆ. ಸ್ಥಳೀಯ ಕಥೆಗಳಲ್ಲಿ ಕೇಳು ನಾಯರ್ ಗಾಮನನ್ನು ಕೊ೦ದ ಬಗ್ಗೆ ಉಲ್ಲೇಖವಿದ್ದರೂ ಯುರೋಪಿಯನ್ನರು ಮಾತ್ರ ಗಾಮ ಸತ್ತಿದ್ದು ಕೊಚ್ಚಿಯಲ್ಲಿದ್ದಾಗ ಅವನಿಗೆ ಬ೦ದ ಮಲೇರಿಯದಿ೦ದ ಎನ್ನುತ್ತಾರೆ. ಅದೇನೇ ಇದ್ದರೂ ಇ೦ಥದ್ದೊ೦ದು ಅದ್ಭುತ ಚಿತ್ರವನ್ನು ನೀಡಿದ ಸ೦ತೋಷ್ ಸಿವನ್-ಗೆ ಹ್ಯಾಟ್ಸ್ ಆಫ್ ಹೇಳಲೇ ಬೇಕು.

          ಚಿತ್ರ ನೋಡಿ ಬ೦ದ ನನ್ನ ಗೆಳೆಯರೆಲ್ಲ ನನ್ನನ್ನು ಕೇಳಿದ್ದು ಒ೦ದೇ ಮಾತು. ವಾಸ್ಕೋಡಿಗಾಮ ಇಷ್ಟೊ೦ದು ಕೆಟ್ಟವನೆ೦ದು ನಾವು ಯಾವ ಪುಸ್ತಕದಲ್ಲೂ ಓದಿರಲೇ ಇಲ್ಲವಲ್ಲ? ಈ ಪ್ರಶ್ನೆಗೆ ಮಾತ್ರ ನನ್ನಲ್ಲಿ ಉತ್ತರವಿರಲಿಲ್ಲ. ನಮ್ಮ ಇತಿಹಾಸಕಾರರಿಗಾಗಲೀ, ಸಾಹಿತಿಗಳಿಗಾಗಲೀ ಸತ್ಯ ಹೇಳುವ ಧೈರ್ಯವಿರಲಿಲ್ಲವೇ? ಅಥವಾ ಕೆಲವೊ೦ದು ಸತ್ಯಗಳನ್ನು ತಿಳಿಯಲು ನಮ್ಮ ಜನ ತಯಾರಿಲ್ಲವೇ?

ಬುಧವಾರ, ಆಗಸ್ಟ್ 10, 2011

ಆರೆಸ್ಸೆಸ್ ಬಾಂಬ್ ತಯಾರಿಸುವ ಕಾರ್ಖಾನೆಯೇ ?

by PRATAP SIMHA, 
07.08.2011


ಆರೆಸ್ಸೆಸ್ ಬಾಂಬ್ ತಯಾರಿಸುವ ಕಾರ್ಖಾನೆಯೇ ?


ನಾನು ಕ್ರೈಸ್ತ. ಜನ್ಮತಃ ಕ್ರೈಸ್ತ. ನಾನು ಪಾಲಿಸುವುದು, ಅನುಸರಿಸುವುದು, ವಿಶ್ವಾಸಿಸುವುದೂ ಕ್ರೈಸ್ತ ಧರ್ಮವನ್ನೇ. ಪ್ರತಿ ಭಾನುವಾರ ಚರ್ಚ್ ಗೆ ಹೋಗುತ್ತೇನೆ.
ಆದರೆ…
ನಾನು ಆರೆಸ್ಸೆಸ್ ನಿಂದಲೂ ಬಹಳಷ್ಟು ವಿಚಾರಗಳನ್ನು ಕಲಿತಿದ್ದೇನೆ. ನಾನು ಆರೆಸ್ಸೆಸ್ ನ ಅಭಿಮಾನಿಯಾಗಿದ್ದು 1979ರಲ್ಲಿ. ಆಗ ಕೋಯಿಕ್ಕೋಡ್ ನ ಜಿಲ್ಲಾ ನ್ಯಾಯಾಧೀಶನಾಗಿದ್ದೆ. ಸರಳ ಜೀವನ, ಉದಾತ್ತ ಚಿಂತನೆ ಆರೆಸ್ಸೆಸ್ ನ ಹೆಗ್ಗುರುತು. ಮಹಾತ್ಮ ಗಾಂಧೀಜಿ ಹತ್ಯೆಗೆ ಆರೆಸ್ಸೆಸ್ ಕಾರಣ ಎನ್ನುವ ಕೆಟ್ಟ ಪ್ರಚಾರಾಂದೋಲನ ಮೊದಲು ನಿಲ್ಲಬೇಕು. ಯಾವುದೋ ಒಂದು ಕಾಲದಲ್ಲಿ ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ವ್ಯಕ್ತಿ ಎಸಗಿದ ಕೃತ್ಯಕ್ಕೆ ಸಂಘಟನೆಯನ್ನೇ ದೂರುವುದು ಸರಿಯಲ್ಲ. ಆರೆಸ್ಸೆಸ್ಸನ್ನು ನ್ಯಾಯಾಲಯವೇ ನಿರ್ದೋಷಿಯೆಂದು ತೀರ್ಪಿತ್ತಿದೆ. ಮಿಗಿಲಾಗಿ ಇಡೀ ಸಿಖ್ ಸಮುದಾಯವೇ ಇಂದಿರಾ ಗಾಂಧಿ ಹತ್ಯೆಗೆ ಕಾರಣ ಎನ್ನಲು ಸಾಧ್ಯವೆ? ಆರೆಸ್ಸೆಸ್ ಅಲ್ಪಸಂಖ್ಯಾತ ವಿರೋಧಿ ಎಂಬ ಪ್ರಚಾರಾಂದೋಲನ ಕೂಡ ಆಧಾರರಹಿತ. ನಾನು ಆರೆಸ್ಸೆಸ್್ನ ದೊಡ್ಡ ಅಭಿಮಾನಿ. ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಏಕಮಾತ್ರ ರಾಜಕೀಯೇತರ ಸಂಘಟನೆ ಆರೆಸ್ಸೆಸ್. ನಮ್ಮ ಮೂಲಭೂತ ಹಕ್ಕುಗಳನ್ನು ಮರಳಿ ಗಳಿಸಿಕೊಡುವುದಕ್ಕಾಗಿ ಹಲವು ಜೀವಗಳನ್ನೇ ಬಲಿಕೊಟ್ಟ ಆರೆಸ್ಸೆಸ್ ಗೆ ನಾವೆಲ್ಲ ಆಭಾರಿಯಾಗಿರಬೇಕು…….”
ಮೊನ್ನೆ ಆಗಸ್ಟ್ 1ರಂದು ಕೊಚ್ಚಿಯಲ್ಲಿ ನಡೆದ ಸಮಾರಂಭವೊಂದನ್ನು ಉದ್ದೇಶಿಸಿ ಸುಪ್ರೀಂ ಕೋರ್ಟ್್ನ ಮಾಜಿ ನ್ಯಾಯಮೂರ್ತಿ ಕೆ.ಟಿ. ಥಾಮಸ್ ಈ ರೀತಿ ಹೇಳುತ್ತಿದ್ದರೆ ನೆರೆದವರು ನಿಬ್ಬೆರಗಾಗಿ ನೋಡುತ್ತಿದ್ದರು!
ತುರ್ತು ಪರಿಸ್ಥಿತಿಯೊಂದೇ ಅಲ್ಲ. ಭಾರತ-ಪಾಕಿಸ್ತಾನ, ಭಾರತ-ಚೀನಾ ಯುದ್ಧಗಳ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವು ನೀಡಿದ ಸಂಘಟನೆ ಅದು. ಯಾವ ಪ್ರಧಾನಿ ನೆಹರು ಗಾಂಧೀ ಹತ್ಯೆ ನೆಪದಲ್ಲಿ ಆರೆಸ್ಸೆಸ್ ಮೇಲೆ ನಿಷೇಧ ಹೇರಿದ್ದರೋ ಅದೇ ನೆಹರು ಚೀನಾ ಯುದ್ಧದ ತರುವಾಯ ಗಣರಾಜ್ಯೋತ್ಸವ ದಿನದ ಪರೇಡ್ ಗೆ ಆರೆಸ್ಸೆಸ್ ಗೆ ಆಹ್ವಾನ ನೀಡಿದ್ದರು. ಇಂದಿಗೂ ಬರ, ನೆರೆ, ಪ್ರವಾಹ, ಪ್ರಕೋಪ, ವಿಕೋಪ, ಭೂಕಂಪ, ದುರ್ಘಟನೆ ಯಾವುದೇ ಅನಾಹುತಗಳು ಸಂಭವಿಸಿದರೂ ಮೊದಲಿಗೆ ಧಾವಿಸುವುದು ಆರೆಸ್ಸೆಸ್, ನಂತರ ಆಗಮಿಸುತ್ತದೆ ನಮ್ಮ ಸರ್ಕಾರಿ ಆಡಳಿತ ಯಂತ್ರ. ಇಷ್ಟಾಗಿಯೂ ಬಹಳಷ್ಟು ಜನ ಆರೆಸ್ಸೆಸ್ ಶಾಖೆಗೂ ಮದ್ರಸಾಗಳಿಗೂ ಯಾವುದೇ ವ್ಯತ್ಯಾಸವಿಲ್ಲದಂತೆ ಭಾವಿಸಿದ್ದಾರೆ, ಮಾಧ್ಯಮಗಳ ಒಂದು ವರ್ಗವೂ ಅದೇ ತೆರನಾದ ಪ್ರಚಾರಾಂದೋಲನ ಮಾಡುತ್ತದೆ, ಅನುಮಾನಗಳನ್ನು ಹೋಗಲಾಡಿಸುವ ಬದಲು ಹುಸಿ ವರದಿಗಳ ಮೂಲಕ ಅನುಮಾನಕ್ಕೆ ಇನ್ನಷ್ಟು ಆತಂಕಗಳ ಭಾರವನ್ನು ಹೊರಿಸುತ್ತವೆ. ಹಾಗಂತ ಆರೆಸ್ಸೆಸ್ ಬಗ್ಗೆ ಇರುವ ಅನುಮಾನಗಳು ನಿಜವಾಗಿ ಬಿಡುತ್ತವೆಯೇ? ಮದ್ರಸಾಗಳಿಗೂ, ಶಾಖೆಗಳಿಗೂ ವ್ಯತ್ಯಾಸವಿಲ್ಲವೆ? ಇಷ್ಟಕ್ಕೂ ಶಾಖೆಗಳಲ್ಲಿ ಹೇಳಿಕೊಡುವುದಾದರೂ ಏನನ್ನು? ತಥಾಕಥಿತ ವಿರೋಧಿಗಳು ಎಂದಾದರೂ ಶಾಖೆಗೆ ಹೋಗಿ ಸತ್ಯಾಸತ್ಯವನ್ನು ಪರೀಕ್ಷಿಸಿ ನೋಡಿದ್ದಾರೆಯೇ? ಆರೆಸ್ಸೆಸ್ ಕಚೇರಿಗಳಿಗೆ ಹೋಗಿ, ಅಲ್ಲಿರುವ ಗ್ರಂಥಾಲಯದ ಕಪಾಟುಗಳನ್ನು ತಡಕಾಡಿದರೆ ಏನು ಸಿಗಬಹುದು ಅಂದುಕೊಂಡಿರಿ?

ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಶಿವಾಜಿ ಮಹಾರಾಜ, ಚಂದ್ರಶೇಖರ ಆಝಾದ್, ಆಲ್ಫಾಕುಲ್ಲಾ ಖಾನ್ ಇಂತಹ ಅಪ್ರತಿಮ ಶೂರರ ಶೌರ್ಯ, ಸಾಹಸ, ಹೋರಾಟ, ತ್ಯಾಗ, ಬಲಿದಾನಗಳನ್ನು ಹೇಳುವ ಪುಸ್ತಕಗಳು ಸಿಗುತ್ತವೆಯೇ ಹೊರತು ಬಾಂಬ್್ಗಳಲ್ಲ. ಆರೆಸ್ಸೆಸ್ ನ ಶಾಖೆಗಳಲ್ಲಿ ಹೇಳಿಕೊಡುವುದೂ ಇಂತಹ ವೀರರ ಕಥೆಗಳನ್ನೇ. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣಾರ್ಪಣೆ ಮಾಡಿದ ಇಂತಹ ಕ್ರಾಂತಿಕಾರಿಗಳನ್ನು NCERT ಪುಸ್ತಕಗಳಲ್ಲಿ  “ಭಯೋತ್ಪಾದಕ “ರೆಂದು ಚಿತ್ರಿಸಿರುವ ಕಾಂಗ್ರೆಸ್ಸಿಗರಿಂದ ಆರೆಸ್ಸೆಸ್ ಬಗ್ಗೆ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವೇ? ಕಳೆದ ವಾರ ಸಿಎನ್ ಎನ್-ಐಬಿಎನ್ ಚಾನೆಲ್ ನ  “ಡೆವಿಲ್ಸ್ ಅಡ್ವೊಕೇಟ್  ” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್  “ಆರೆಸ್ಸೆಸ್ ಒಂದು ಬಾಂಬ್ ತಯಾರಿಸುವ ಕಾರ್ಖಾನೆ ” ಎಂದಿದ್ದಾರೆ! 2008ರಲ್ಲಿ ಮುಂಬೈ ಮೇಲೆ ದಾಳಿಯಾದಾಗಲೂ ಹಿಂದು ಭಯೋತ್ಪಾದಕರ ಕೈವಾಡವಿರಬಹುದು ಎಂದಿದ್ದ ಆಗಿನ ಕೇಂದ್ರ ಸಚಿವ ಎ.ಆರ್. ಅಂಟುಳೆ ಆರೆಸ್ಸೆಸ್ ನತ್ತ ಬೆರಳು ತೋರಿದ್ದರು. ಅದರ ಬೆನ್ನಲ್ಲೇ ತಮ್ಮ ಆಚಾರವಿಲ್ಲದ ನಾಲಗೆಯನ್ನು ಹೊರ ಹಾಕಿದ್ದ ದಿಗ್ವಿಜಯ್ ಸಿಂಗ್,  “ಮುಂಬೈ ದಾಳಿಯಲ್ಲಿ ಮಡಿದ ಹೇಮಂತ್ ಕರ್ಕರೆ ದಾಳಿಗಿಂತ 2 ಗಂಟೆ ಮೊದಲು ನನಗೆ ಕರೆ ಮಾಡಿ, ಹಿಂದು ಕಟ್ಟರ್ ವಾದಿಗಳಿಂದ ನನಗೆ ಜೀವ ಬೆದರಿಕೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು ” ಎನ್ನುವ ಮೂಲಕ ಮತ್ತೆ ಆರೆಸ್ಸೆಸ್-ವಿಶ್ವ ಹಿಂದು ಪರಿಷತ್ ಬಗ್ಗೆಯೇ ಸಲ್ಲದ ಟೀಕೆ ಮಾಡಿದ್ದರು. ಮೊನ್ನೆ ಜುಲೈ 13ರಂದು ಕಸಬ್ ಜನ್ಮದಿನದ ಕೊಡುಗೆ ರೂಪದಲ್ಲಿ ಮತ್ತೆ ಮುಂಬೈ ಮೇಲೆ ಆಕ್ರಮಣವಾದಾಗಲೂ ದಿಗ್ವಿಜಯ್ ಆರೆಸ್ಸೆಸ್ ನ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿದರು. ನನ್ನ ಬಳಿ ಸಾಕ್ಷ್ಯಾಧಾರವಿದೆ ಎಂದೂ ಪ್ರತಿಪಾದಿಸಿದರು. ಈತ ಎಂತಹ ಹರುಕುಬಾಯಿಯ ವ್ಯಕ್ತಿ ಎಂಬುದು ಇಡೀ ದೇಶಕ್ಕೇ ಗೊತ್ತಾಗಿದೆ. ಟ್ವಿಟ್ಟರ್ ನಲ್ಲಿ  “ಡಿಗ್ಗಿಲೀಕ್ಸ್  ” ಎಂಬ ಒಂದು ಥ್ರೆಡ್ ಇದ್ದರೆ, ಫೇಸ್ ಬುಕ್, ಆರ್ಕುಟ್ ಗಳಲ್ಲಿ ನಾಯಿಯ ಮುಸುಡಿಗೆ ಇವರ ಮುಖ ಅಂಟಿಸಿ,  “DOGvijay “  ಎಂದೇ ಸಂಬೋಧಿಸಲಾಗುತ್ತಿದೆ! ಹಾಗಿದ್ದರೂ ಮಾಧ್ಯಮಗಳೇಕೆ ಇಂತಹ ಮತಿಗೇಡಿ ಮನುಷ್ಯನ ಮಾತಿಗೆ ಸಲ್ಲದ ಪ್ರಚಾರ ಕೊಟ್ಟು ಆರೆಸ್ಸೆಸ್ಸನ್ನು ಪದೇ ಪದೆ ಕಟಕಟೆಗೆ ತಂದು ನಿಲ್ಲಿಸಲು, ಸಮಜಾಯಿಸಿ ನೀಡಬೇಕಾದ ಅನಿವಾರ್ಯತೆ ಸೃಷ್ಟಿಸಲು ಪ್ರಯತ್ನಿಸುತ್ತವೆ? ಪಾಕಿಸ್ತಾನದ ಅಬೋಟಾಬಾದ್್ನಲ್ಲಿ ಅಡಗಿದ್ದ ಒಸಾಮ ಬಿನ್ ಲಾಡೆನ್ ನನ್ನು ಕಳೆದ ಮೇ 2ರಂದು ಅಮೆರಿಕ ಪತ್ತೆಹಚ್ಚಿ ಕೊಂದಾಗ,  “ಒಸಾಮಾಜಿ ” ಎಂದು ಸಂಬೋಧಿಸಿದ್ದ ಈ ವ್ಯಕ್ತಿಯ ಯೋಗ್ಯತೆ ಏನೆಂದು ಗೊತ್ತಾಗಿಲ್ಲವೇ? ಆತನ ಮಾತಿಗೆ ಎಷ್ಟು ಬೆಲೆ ಕೊಡಬೇಕೆಂಬುದು ತಿಳಿದಿಲ್ಲವೆ? ಏಕೆ ಆರೆಸ್ಸೆಸ್ಸನ್ನು ಹಳಿಸಲು ಇಂತಹ ಅಯೋಗ್ಯ ವ್ಯಕ್ತಿಗಳನ್ನು ಬಳಸಿಕೊಳ್ಳುತ್ತಾರೆ?
ಅದಿರಲಿ, ಕಳೆದ ಎಂಟೂವರೆ ದಶಕಗಳಿಂದ ರಾಷ್ಟ್ರಚಿಂತನೆಯ ಪ್ರಸಾರದಲ್ಲಿ, ರಾಷ್ಟ್ರಭಕ್ತಿಯನ್ನು ಮೂಡಿಸುವ ಕಾರ್ಯದಲ್ಲಿ ತೊಡಗಿರುವ ಆರೆಸ್ಸೆಸ್್ನಲ್ಲಾಗಲಿ, ಅದಕ್ಕೆ ಹೊಂದಿಕೊಂಡಿರುವ ವಿಶ್ವ ಹಿಂದು ಪರಿಷತ್್ನಲ್ಲಾಗಲಿ ಅಸೀಮಾನಂದ, ಪ್ರಗ್ಯಾಸಿಂಗ್, ಇಂದ್ರೇಶ್ ಕುಮಾರ್ ಮುಂತಾದ ಕೋಪಾಗ್ನಿಗಳು ಏಕೆ ಸೃಷ್ಟಿಯಾದವು? ಈ ಬಗ್ಗೆ ದಿಗ್ವಿಜಯ್ ಸಿಂಗ್ ಅವರು ಹಾಗೂ ಅವರ ಮಾಧ್ಯಮ ಮಿತ್ರರು ಒಸಾಮನ ವಂಶಸ್ಥರನ್ನೇ ಪ್ರಶ್ನಿಸಬಹುದಲ್ಲವೆ? 900 ವರ್ಷಗಳ ಮುಸ್ಲಿಂ ಆಕ್ರಮಣಕಾರರ ದೌರ್ಜನ್ಯ, 150 ವರ್ಷಗಳ ಬ್ರಿಟಿಷ್ ದೌರ್ಜನ್ಯವನ್ನೇ ಸಹಿಸಿಕೊಂಡಿದ್ದ ಹಿಂದುಗಳಲ್ಲಿ ಈಗೇಕೆ ಕೋಪಾಗ್ನಿ ಸ್ಫೋಟಗೊಳ್ಳುತ್ತಿದೆ? ಮಾಲೆಗಾಂವ್ ಸ್ಫೋಟ, ಅಜ್ಮೇರ್ ದುರಂತಗಳು ಏಕೆ ಸಂಭವಿಸಿದವು? ಮುಸ್ಲಿಮರು ಭಯೋತ್ಪಾದನೆಯತ್ತ ಆಕರ್ಷಿತಗೊಳ್ಳಲು ಅನಕ್ಷರತೆ, ನಿರುದ್ಯೋಗ, ಹಿಂದು ಕೋಮುವಾದ ಹೀಗೆ ಕಾರಣ ಹುಡುಕುತ್ತಾರಲ್ಲಾ ಹಿಂದುಗಳ ಪ್ರತಿದಾಳಿಗೆ ಎಡೆಮಾಡಿಕೊಟ್ಟಿರುವ ಕಾರಣವನ್ನೂ ಹುಡುಕಬಹುದಲ್ಲವೆ? ಇನ್ನು ಎಷ್ಟು ವರ್ಷ ಅಂತ ಇಸ್ಲಾಮಿಕ್ ಭಯೋತ್ಪಾದನೆಯನ್ನು ಸಹಿಸಿಕೊಳ್ಳಬೇಕು? ಸುಮ್ಮನೆ ಕುಳಿತರೆ ಯಾವ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂಬುದಕ್ಕೆ ಕಾಶ್ಮೀರಿ ಪಂಡಿತರ ಉದಾಹರಣೆ ಕಣ್ಣಮುಂದಿಲ್ಲವೆ? ಇಸ್ಲಾಮಿಕ್ ಭಯೋತ್ಪಾದನೆಯನ್ನು ನಮ್ಮ ಸರ್ಕಾರವೇ ತಹಬಂದಿಗೆ ತರುವ ದಾಢಸಿತನ ತೋರಿದ್ದರೆ ಹಿಂದುಗಳ ಆಕ್ರೋಶಕ್ಕೆ ಕಾರಣವೇ ಇರುತ್ತಿರಲಿಲ್ಲ, ಅಲ್ಲವೆ?
1947ರಲ್ಲಿ ದೇಶ ವಿಭಜನೆಯಾದಾಗ ಪೂರ್ವಪಾಕಿಸ್ತಾನದಲ್ಲಿ (ಬಾಂಗ್ಲಾದೇಶ) 30 ಪರ್ಸೆಂಟ್ ಇದ್ದ ಹಿಂದುಗಳ ಸಂಖ್ಯೆ ಈಗ ಎಷ್ಟಿದೆ? 1991ರ ಬಾಂಗ್ಲಾ ಜನಗಣತಿಯ ಪ್ರಕಾರ ಹಿಂದುಗಳ ಸಂಖ್ಯೆ 10.5 ಪರ್ಸೆಂಟ್! ಇವತ್ತು ಆ ಪ್ರಮಾಣ 5 ಪರ್ಸೆಂಟ್್ಗಿಂತಲೂ ಕೆಳಗಿಳಿದಿದೆ. ಇದಕ್ಕೆ ಯಾರು ಕಾರಣ? ಇದುವರೆಗೂ 2 ಕೋಟಿ ಬಾಂಗ್ಲಾ ಹಿಂದುಗಳು ಕಣ್ಮರೆಯಾಗಿದ್ದಾರೆ. ಒಂದೋ ಅವರು ಬಲವಂತವಾಗಿ ಮತಾಂತರಗೊಂಡಿದ್ದಾರೆ, ಇಲ್ಲವೆ ಮಸಣ ಸೇರಿದ್ದಾರೆ. ಈ ಮಧ್ಯೆ ನಮ್ಮ ಪಶ್ಚಿಮ ಬಂಗಾಳದಲ್ಲಿ 1947ರಲ್ಲಿ ಶೇ 12ರಷ್ಟಿದ್ದ ಮುಸ್ಲಿಮರ ಸಂಖ್ಯೆ ಇವತ್ತು 26 ಪರ್ಸೆಂಟ್ ದಾಟಿದೆ! ಅದು ಸಾಲದೆಂಬಂತೆ ದೀಪಾವಳಿಯ ಮುನ್ನಾದಿನ ರಾಜಧಾನಿ ದಿಲ್ಲಿಯಲ್ಲಿ ಹಬ್ಬದ ಖರೀದಿಯಲ್ಲಿ ತೊಡಗಿದ್ದ 65 ಹಿಂದೂಗಳನ್ನು ಬಾಂಬ್ ಸ್ಫೋಟಿಸಿ ಕೊಂದರು, ಅಕ್ಷರಧಾಮದ ಮೇಲೆ ಆಕ್ರಮಣ ಮಾಡಿದರು. ಇಂತಹ ಘಟನೆಗಳನ್ನು ಹಿಂದುಗಳು ಎಷ್ಟು ದಿನ ಅಂತ ಸಹಿಸಿಕೊಂಡು ಕುಳಿತುಕೊಳ್ಳಬೇಕು? ಹಿಂದುಗಳು ಬಂದೂಕು ಎತ್ತುವಂತೆ, ಬಾಂಬಿಡುವಂತೆ ಮಾಡಿದವರಾರು? ಆತ್ಮರಕ್ಷಣೆಗಾಗಿ ಬಾಂಬ್ ಮೂಲಕವೇ ಪ್ರತ್ಯುತ್ತರ ನೀಡಲು ಹೊರಟರೆ ಅದನ್ನು ಹೇಗೆ ಭಯೋತ್ಪಾದನೆ ಎನ್ನಲು ಸಾಧ್ಯ? 1972ರ ಮ್ಯೂನಿಕ್ ಒಲಿಂಪಿಕ್ಸ್ ವೇಳೆ ಇಸ್ರೇಲಿ ಕ್ರೀಡಾ ತಂಡವನ್ನು ಒತ್ತೆಯಾಗಿ ತೆಗೆದುಕೊಂಡು ಕಗ್ಗೊಲೆಗೈದ ಇಸ್ಲಾಮಿಕ್ ಭಯೋತ್ಪಾದಕರು ಹಾಗೂ ಅವರಿಗೆ ಬೆಂಬಲ ಕೊಟ್ಟವರನ್ನು ಇಸ್ರೇಲ್ ಹೆಕ್ಕಿ ಕೊಲ್ಲಲಿಲ್ಲವೆ? 9/11 ದಾಳಿಗೆ ಪ್ರತಿಯಾಗಿ ಅಮೆರಿಕ ಅಫ್ಘಾನಿಸ್ತಾನದ ಮೇಲೆ ಆಕ್ರಮಣ ಮಾಡಲಿಲ್ಲವೆ? ಒಸಾಮನನ್ನು ಬೆನ್ನಟ್ಟಿ ಹೋಗಿ ಕುಕ್ಕಿ ಸಾಯಿಸಲಿಲ್ಲವೆ? ಪಾಕಿಸ್ತಾನದ ಪರಮಮಿತ್ರ ಚೀನಾವೇ ತನ್ನ ನೆಲದಲ್ಲಿ ತಲೆಯೆತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಗೆ ಮೊನ್ನೆ ಪಾಕಿಸ್ತಾನವನ್ನು ದೂರಿಲ್ಲವೆ? ಸ್ಥಳೀಯರ ಸಹಾಯವಿಲ್ಲದೆ ಮುಂಬೈನಂಥ ದಾಳಿಯನ್ನು, ಹೈದರಾಬಾದ್್ನ ಲುಂಬಿನಿ ಗಾರ್ಡನ್, ದಿಲ್ಲಿ, ಪುಣೆಯ ಜರ್ಮನ್ ಬೇಕರಿ ಸ್ಫೋಟಗಳಂಥ ದಾಳಿಗಳನ್ನು ಮಾಡಲು ಸಾಧ್ಯವಿತ್ತೆ? ಅಸೀಮಾನಂದ, ಪ್ರಗ್ಯಾಸಿಂಗ್್ರಂಥವರು ಇಂತಹ ದಾಳಿಗಳಿಂದ ಸೃಷ್ಟಿಯಾದ ಪ್ರತ್ಯಾಸ್ತ್ರಗಳೆನಿಸುವುದಿಲ್ಲವಾ?
ಈ ದೇಶ ಇಬ್ಭಾಗವಾಗಲು ಕಾರಣವಾದ ಮುಸ್ಲಿಂ ಲೀಗ್ ನ ಹೆಸರನ್ನಿಟ್ಟುಕೊಂಡಿರುವವರ ಜತೆ ಸೇರಿ ಕೇರಳದಲ್ಲಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ಸಿಗರಿಗೆ ಆರೆಸ್ಸೆಸ್ ಎಂಥ ರಾಷ್ಟ್ರವಾದಿ ಸಂಘಟನೆ, ಹಿಂದುಗಳ ಆತಂಕಗಳೇನು ಎಂಬುದು ಹೇಗೆ ತಾನೇ ಅರ್ಥವಾದೀತು?