ಸೋಮವಾರ, ಆಗಸ್ಟ್ 22, 2011

ಹೀಗೊಂದು ಶುದ್ದ ಸುಳ್ಳು




ಕನ್ನಡಪ್ರಭ ೨೦.೦೫.೨೦೧೧ ಪುಟ ೫ ರಲ್ಲಿ ಪ್ರಕಟವಾಗಿರುವ ಮೇಲಿನ ವರದಿಯಲ್ಲಿ ಕುವೈತ್ ನಲ್ಲಿರುವ ಇನ್ಫೋಸಿಸ್ ಕಟ್ಟಡ ಎಂದು ಈ ಚಿತ್ರವನ್ನು ಪ್ರಕಟಿಸಿದ್ದಾರೆ.

ಆದರೆ ಇಂತಹ ಯಾವುದೇ ಕಟ್ಟಡ ಅಲ್ಲಿ ಇಲ್ಲ ಎಂದು ಅಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತು. ಹಾಗು ಇನ್ಫೋಸಿಸ್ ಅಧಿಕೃತ ವೆಬ್ ಸೈಟ್ನಲ್ಲಿ ಸಹ ಈ ಬಗ್ಗೆ ಮಾಹಿತಿ ಇಲ್ಲ. ಅದೂ ಅಲ್ಲದೆ ಕುವೈತ್ ನಲ್ಲಿ ಅವರ ಯಾವುದೇ ಕಛೇರಿ ಇಲ್ಲ ಎಂದು ಈ ಕೆಳಗಿನ ಲಿಂಕ್ ನಲ್ಲಿ ಗೊತ್ತಾಗುತ್ತೆ
ಹೀಗಿರುವಾಗ ಈ ಮಾಹಿತಿ ಇವರಿಗೆ ಹೇಗೆ ಸಿಕ್ಕಿತು?

ಕೆಲ ವರ್ಷಗಳ ಹಿಂದೆ, ಈ ಮೈಲ್ ಗಳಲ್ಲಿ ಇಂತಹ ಅಧ್ಬುತ ಫೋಟೊಗಳು ಹರಿದಾಡುತಿದ್ದವು. ತುಂಬಾ ಜನ ಇಂತಹ ಚಿತ್ರಗಳನ್ನು ನೋಡಿ ಖುಶಿ ಪಟ್ಟಿದ್ದರು. ಆದರೆ ಅಂತಹ ಯಾವುದೇ ಯೋಜನೆಗಳು ಇಲ್ಲ ಎಂದು ತದ ನಂತರ ಗೊತ್ತಾಯಿತು.

ಜವಬ್ದಾರಿಯುತ ಪತ್ರಿಕೆಗಳು ಹಾಗು ವ್ಯಕ್ತಿಗಳು ಹೀಗೆ ಬೇಜವ್ಬ್ದಾರಿಯಿಂದ ಸುದ್ದಿಯನ್ನು ಪ್ರಕಟಿಸುವುದು ಎಷ್ಟು ಸರಿ?

ಇಂದಿಗೂ ಬಹಳಷ್ಟು ಜನ ಪತ್ರಿಕೆಗಳಲ್ಲಿ ಹಾಗು ಟಿವಿಗಳಲ್ಲಿ ಬಂದಿದ್ದು ನಿಜ ವೆಂದು ನಂಬುತ್ತಾರೆ. 
ಆದರೆ ಈ ತಪ್ಪಿಗೆ ಅವರೇ ಉತ್ತರಿಸಬೇಕು.
ತಪ್ಪಯ್ತು ತಿದ್ಕೋತೀವಿ ಅಂತ ಹೇಳ್ತಾರ ಅಥವ ನೀವೇ ತಿದ್ಕೊಳಿ ಅಂತ ಹೇಳ್ತಾರ ನೋಡಬೇಕು.




ಗುರುವಾರ, ಆಗಸ್ಟ್ 18, 2011

ಈ ಎಡವಟ್ಟುಗಳು ಯಾಕೆ ಹೀಗೆ ಅಂತ?


ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ. 
ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು. 


ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.


೧. ಇಡೀ ದೇಸ ಅಣ್ಣಾ ಹೋರಟಕ್ಕೆ ನಿಂತಿದೆ ಅನ್ನೋದು ಸುಳ್ಳು, ಇವರಲ್ಲಿ ರೈತರು ಅವ್ರಾ? ಕೂಲಿ ಕಾರ್ಮಿಕರು ಅವ್ರಾ? 
ಅಲ್ಲಾ ಕಣಣ್ಣೋ, ನಿಮ್ಮಂತೋರು ಸ್ವಾತಂತ್ರ್ಯ ಬರೋದಿಕ್ಕೆ ಮುಂಚೆ ಹುಟ್ಟಿದ್ದಿದ್ದರೆ ಇಂತ ಪ್ರಸ್ನೆ ಖಂಡಿತ ಕೇಳ್ತಿದಿದ್ದ್ರಿ. ಸ್ವಾತಂತ್ರ್ಯ ಕ್ಕೆ ಹೋರಾಟ ಮಾಡೋ ಜನರಲ್ಲಿ ಬಡವರು ಯಾರೂ ಇಲ್ಲ ಬರೀ ಸ್ರೀಮಂತ್ರೇ ತುಂಬಾ ಜನ ಅವ್ರೆ. ಬಡವರು ಎಲ್ಲಾ ಹೋರಾಟ ಮಾಡಾಕ್ಕೆ ಆದೀತಾ? ಹೋರಾಟ ಮಾಡಿದ್ರೆ ಹೊಟ್ಟೆಗೆ ಹಿಟ್ಟು ಕೊಡೋರ್ಯಾರು ಅಂತ ಕೇಳ್ತಿದ್ರಿ ಕಣಣ್ಣೋ! 
ನಿಮ್ಮಂತ ಎಡವಟ್ಟು ಗಳು ಎಲ್ಲ ಕಾಲದಲ್ಲಿ ಇರೋರೆ. ಅವಾಗಿನ ಕಾಲದ್ದು ಒಂದು ಮಾತು ಇವಾಗ್ಲು ವೇ ಜನ ಮಾತಾಡ್ತಾರೆ. ಯಾರು ರಾಜ ಆದ್ರೇನು ಯಾರು ಮಂತ್ರಿ ಆದರೇನು ರಾಗಿ ಬೀಸೋದು ತಪ್ಪಲ್ಲ ಅಂತ. ಈ ಮಾತು ಎಲ್ಲ ಕಾಲಕ್ಕು ಒಪ್ಪುತ್ತೆ.
೨. ಜನಲೋಕಪಾಲ್ ಬೇಕು ಎಂದು ಚಳವಳಿಗೆ ಇಳಿದಿರುವವರ ಹೆಚ್ಚು ಮಂದಿ ಅದನ್ನೊಮ್ಮೆ ಓದಿಕೊಂಡೇ ಇಲ್ಲ. ಅಣ್ಣಾ ಹಜಾರೆಯವರ ಜನಲೋಕಪಾಲ್ ಹಾಗು ಸರ್ಕಾರ ತರಲು ಹೊರಟಿರುವ ಲೋಕಪಾಲ್ ನಡುವೆ ಇರುವ ವ್ಯತ್ಯಾಸಗಳೂ ಅವರಿಗೆ ಗೊತ್ತಿಲ್ಲ
ನೀವು ಹೇಳೋದು ನೋಡಿದ್ರೆ ಎಲ್ಲ ಓದಿ ತಿಳ್ಕೊಂಡು ಪ್ರತಿಭಟನೆ ಮಾಡಿ ಅಂತಿದೀರಾ, ಎಲ್ಲ ಕಾನೂನುಗಳನ್ನು ಓದಿ ತಿಳ್ಕೋಂಡು ಕುಂತ್ಕಳ್ಳಕ್ಕೆ ನಮ್ಮ ಕೈಲಿ ಆಗ್ತದಾ ಬುದ್ದಿ. ಓದಿರೋ ಬುದ್ದಿವಂತರು ನಮ್ಮಂತ ಬಡವರ ಪರವಾಗಿ ಓದಿ ತಿಳ್ಕಂಡು ನಮ್ಮ ದೇಸದ ಜನಕ್ಕೆ ಯಾವುದು ಸರಿ ಯಾವುದು ಸರಿಯಲ್ಲ ಅಂತ ಹೇಳಿದ್ರೆ ಸಾಕಪ್ಪ. ಅಂಗೆ ನೋಡಿದ್ರೆ ನ್ಯಾ.ಸಂತೋಷ್ ಹೆಗ್ಡೆಗೆ ಗೊತ್ತಿಲ್ವ ನಮ್ಮ ಜನಕ್ಕೆ ಯಾವೂದು ಬೇಕು ಯಾವ್ದು ಬೇಡ.  ಅವರೆ ತಾನೆ ಯಡ್ಯೂರಪ್ಪ ನ ರಾಜಿನಾಮೆ ಗೆ ಕಾರಣರಾದವ್ರು, ಅಂಥವರ ಮಾರ್ಗದರ್ಶನ ನಮಗೆ ಬೇಡ ಅಲ್ವಾ. ಯಡ್ಯೂರಪ್ಪನ ರಾಜಿನಾಮೆಗೆ ಮಾತ್ರ ಅವರು ಬೇಕಾಗಿತ್ತು. ಈಗ ಬೇಡ ಅಲ್ವಾ ಸಾ. ಈ ದೇಸದಲ್ಲಿ  ನೂರಾರು ಕಾನೂನುಗಳು ಅವೆ, ಅವೆಲ್ಲವನ್ನು ನಾವು ಓದಿ ತಿಳ್ಕಳ್ಳಾಕ್ಕಾಯ್ತದ. ಅದಕ್ಕಂತನೇ ವಕೀಲರು, ನ್ಯಾಯಮೂರ್ತಿಗಳು ಅಂತ ಸರ್ಕಾರನೇ ಮಾಡಿಲ್ವ. ಅವರೆಲ್ಲರ ಪ್ರಾಮಾಣಿಕತೆಯ ಫಲವಾಗಿ ಇಂದು ದೊಡ್ಡ ದೊಡ್ಡ ಮಂತ್ರಿ ಮಹೋದಯರು ಕಂಬಿ ಏಣಿಸ್ತಾಇಲ್ವಾ. 
ನಿಮ್ದೊಳ್ಳೆ ಕ್ಯಾತೆ ಸಾರ್,  ಹಂಗೇ ಹೋದರೆ "ಹಂಗಲ್ಲ" ಹಿಂಗೆ ಅಂತೀರಾ, ಹಿಂಗೇ ಹೋದರೆ ಹಿಂಗಲ್ಲ ಅಂತೀರಾ, ಒಳ್ಳೆ ಎಡವಟ್ಟು ಜನಗಳು ಸಾರ್ ನೀವು!
೩.ಬೆಳೆದು ನಿಂತಿರೋ ಭ್ರಷ್ಟಾಚಾರಕ್ಕೆ ರಾಜಕಾರಣಿಗಳು ಅಧಿಕಾರಿಗಳು ಎಷ್ಟು ಕಾರಣವೋ, ಇಲ್ಲೀ ತನಕ ಬೆಳೆಯೋ ದಕ್ಕೆ ಬಿಟ್ಟಿದ್ದು ನಮ್ಮಂಥ ಸಾಮಾನ್ಯ ಜನಗಳೂ ಕಾರಣ ಅಲ್ವಾ.
ಸರಿ, ತಪ್ಪೋ ಆಗಿ ಹೋಗಿದೆ ಈಗ ತಪ್ಪು ತಿಳ್ಕೋಳ್ಳೊದು ತಪ್ಪಾ. ಇದು ಬಿಟ್ಟು ಮತ್ತೇನು ಮಾಡ್ಬೇಕಿತ್ತು? ಅದಕ್ಕೆ ವಸೀ ಉತ್ತರ ಕೊಡ್ತೀರಾ.
೪. ಅಣ್ಣಾ ನಡವಳಿಕೆ ಪ್ರಜಾಸತ್ತೆಗೆ ಮಾರಕ’ ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಈ ದೇಶದ ಸಮಸ್ತ ವರ್ಗ, ಜಾತಿಗಳ ಪ್ರತಿನಿಧಿಯಲ್ಲ. ಸಂಸತ್ತನ್ನು ತನ್ನ ಮೂಗಿನ ನೇರಕ್ಕೆ ನಿಯಂತ್ರಿಸುವುದು ತಪ್ಪು.


ನಮ್ಮ ಪ್ರತಿನಿಧಿಗಳಾಗಿ ಇವರು ಕಡಿದು ಗುಡ್ಡೆ ಹಾಕಿದ್ದು ಅಷ್ಟರಲ್ಲೇ ಇದೆ, ಸತತವಾಗಿ ಕೇಂದ್ರದಲ್ಲಿ ೫೦ ವರ್ಷ ಆಳ್ವಿಕೆ ಮಾಡಿದ ಪಕ್ಷ ಏನು ಮಾಡಿದೆ ಅಂತ ಈ ಪ್ರಪಂಚಕ್ಕೆ ಗೊತ್ತು. ಭ್ರಷ್ಟಚಾರದ ಇವತ್ತಿನ ಈ ಸ್ಥಿತಿಗೆ ಇವರು ಕಾರಣರಲ್ಲದೆ ಬೇರೆ ಯಾರು ಸಾರ್? ಈ ಬೇಗುದಿಯನ್ನು ಇಂದು ಅಣ್ಣಾಗೆ ಬೆಂಬಲಿಸುವ ಮೂಲಕ ಹೊರಗೆ ಬಿಡುತಿದ್ದಾರೆ. ಈ ಪ್ರಜಾಸತ್ತಾತ್ಮಕ ಆಡಳಿತ ದಿಂದಾನೆ, ಈ ರಾಜಕಾರಣಿಗಳು ಈ ದೇಶಾನ ಲೂಟಿ ಮಾಡಿದ್ದು.
ಅಕ್ರಮ ಗಣಿಗಾರಿಕೆ ಅಂತ ಬಾಯಿ ಬಾಯಿ ಬಡ್ಕೊಂಡ್ರಿ, ಆದರೆ ಗಣಿಗಾರಿಕೆ ಮಾಡೋದಿಕ್ಕೆ ಲೈಸೆನ್ಸ್ ಕೊಟ್ಟಿದ್ದು ನಾವು ಆರಿಸಿ ಕಳ್ಸಿದ ಸಂಸತ್ತಿನ ಜನರಲ್ವೇ?
ರಾಷ್ಟ್ರೀಯ ಸಂಪತ್ತು ನ್ನ ಹೇಗೆ ರಕ್ಷಿಸಬೇಕು ಅಂತ ಇವರ್ಯರಿಗು ಗೊತ್ತಿರಲಿಲ್ವ? ಡೀ ನೋಟಿಫಿಕೇಶನ್ ಯಾಕೆ ಬೇಕಿತ್ತು, ಆ ಕಾನೂನನ್ನು ಮಾಡಿದ್ದು ಯಾರು? ನಮ್ಮ ರಾಜಕಾರಣಿಗಳಲ್ವೆ, ಅವರಿಗೆ ಎಲ್ಲಿ ಲಾಭವಾಗುತ್ತೊ ಅಂತಹ ಕಾನೂನು ಮಾಡಿಕೊಂಡ್ರು. ಅವರು ತಿಂದು, ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿ ಮೊಮ್ಮಕ್ಕಳು ತಿನ್ನೋತನಕ ಆಸ್ತಿ ಮಾಡಿಟ್ಟಿದ್ದಾರೆ ನಾವು ಆರಿಸಿ ಕಳುಹಿಸಿದ ಜನ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು.
ಸುಮ್ಮನೆ ಕಾಗಕ್ಕ ಗ್ಗುಬ್ಬಕ್ಕನ ಕತೆ ಗಳನ್ನು ಹೇಳ್ತಾ ಜನರ ದಿಕ್ಕನ್ನು ಯಾಕೆ ಬದಲಾಯಿಸ್ತೀರಾ?
೫. ಉಪವಾಸ ಸತ್ಯಾಗ್ರಹದ ಮೂಲಕ ಕೇಂದ್ರ ಸರ್ಕಾರವನ್ನು ಮಣಿಸಬಹುದು ಎಂಬುದು ಅಣ್ಣಾ ತಂಡದ ಎಣಿಕೆ.


ಗಾಂಧಿ ತಾತ ಹೇಳಿ ಕೊಟ್ಟ ಪಾಠ, ಎಲ್ಲರಿಗೂ ಚೆನ್ನಾಗಿ ಗೊತ್ತು. ಉಪ್ವಾಸ ಮಾಡಿ ಏನೇನಲ್ಲ ಮಾಡಿದ್ರು ಅಂತ ಇತಿಹಾಸ ಪುಸ್ತಕ ಹೇಳುತ್ತೆ. ಇನ್ನು ನಾವೇನು ಹೇಳೋದು.
೬. ಅಣ್ಣಾ ಚಳವಳಿ ಎಲ್ಲ ತರಹದ ಜನಗಳು ಕಾಣಿಸ್ತಾ ಇದ್ದಾರೆ. ಕೆಲವರ ಕೈಯಲ್ಲಿ ರಾಷ್ಟ್ರಧ್ವಜ, ಕೆಲವರ ಕೈಯಲ್ಲಿ ಕೇಸರಿ ಧ್ವಜ, ಮತ್ತೆ ಕೆಲವರ ಕೈಯಲ್ಲಿ ಇನ್ನ್ಯಾವುದೋ ವೆರೈಟಿಯ ಧ್ವಜಗಳು


 


ಅದು ಎಲ್ಲಿ ಕಾಣಿಸ್ತು ಅಂತ ಗೊತ್ತಾಗ್ತಿಲ್ಲ ಸ್ವಾಮಿ, ನಮ್ಮ ಕಣ್ಣಿಗೆ ರಾಷ್ಟ್ರಧ್ವಜ ಬಿಟ್ರೆ ಬೇರೆ ಏನು ಕಾಣಿಸಲಿಲ್ಲ, ಒಂದು ವೇಳೆ ಕಾಣಿಸಿದ್ರೆ ತಪ್ಪೇನು ಅಂತ? ಸ್ವಾತಂತ್ರ್ಯ ಚಳುವಳಿ ಯಲ್ಲೂ ಸಹ ಕೇಸರಿ ಧ್ವಜ ಸಹ ಇತ್ತು, 
ಬೇಕಿದ್ದರೆ ಇತಿಹಾಸದ ಪುಟಗಳನ್ನು ತಿರುವಿ ಹಾಕಿದ್ರೆ ಗೊತ್ತಾಗುತ್ತೆ. ಸುಮ್ಮನೆ ಮನಸ್ನಾಗೆ ಗಲೀಜು ತುಂಬ್ಕೊಂಡು ಬಾಯಲ್ಲಿ ಗಬ್ಬು ನಾರಬೇಡಿ. ನಿಮ್ಮಂತ ಎಡಬಿಡಂಗಿ ಗಳಿಂದ ಇದು ಎಲ್ಲಾ ಕಾಲಕ್ಕೂ ಇದ್ದದ್ದೆ. ಕೇಸರಿ ಕಂಡ್ರೆ ಪಾಪ ಖಾರದ ಉರಿ ಜಾಸ್ತಿಯಾಗುತ್ತೆ ನಿಮ್ಮಂತವರಿಗೆ.
ಇದಕ್ಕೆಲ್ಲ ಕಾರಣ ಏನೆಂದ್ರೆ ಒಟ್ನಾಗೆ ಕೇಸರಿ ಪಡೆ ಇಂತದ್ಯಾವುದೆ ವಿಸ್ಯದಾಗೆ ಮೂಗು ತೂರಿಸಬಾರದು. ಅದು ತೂರಿಸಿದ್ರೆ ನಿಮಗೆಲ್ಲ ಮೆಣಸಿನಕಾಯಿ ತೂರಿಸಿಕೊಂಡಂಗೆ ಆಗ್ತದಲ್ಲಾ.
ಏನು ಮಾಡಕಾಯ್ತದೆ ಎಲ್ಲ ಎಡವಟ್ಟು ಗಳ ಸಹವಾಸ ದೋಸ, ಎಡಬಿಡಂಗಿ ಯಂಗೆ ಆಡ್ತೀರಾ. ನೀವು ಹ್ಹೂಂ ಅಂದ್ರೆ ನಾವು ಹ್ಹೂಂ ಅನ್ನಬೇಕು, ನೀವು ಸೀನಿದ್ರೆ ನಾವು ಸೀನಬೇಕು ಅವಾಗ್ಲೆ ಅಲ್ವ ನಿಮ್ಗೆ ಖುಸಿ ಯಾಗೋದು. 
ಬುಡೀ ಸಾ ಇದೆಲ್ಲ ಪ್ರಜಾಪ್ರಭುತ್ವದಾಗೆ ಕಾಮನ್ನು. ಎಲ್ಲರಲ್ಲು ಬೇರೆ ಬೇರೆ ತರದ್ದು ಅಭಿಪ್ರಾಯ ಇರ್ತದೆ. ನಿಮ್ಮದು ಅಂಗೆ ನಮ್ಮದು ಹಿಂಗೆ. ಏನ್ ಮಾಡೋಕೆ ಆಯ್ತದೆ.

ಮಂಗಳವಾರ, ಆಗಸ್ಟ್ 16, 2011

ಈ ಲೇಖನ ಇಂದಿಗೂ ಪ್ರಸ್ತುತ


ಪಟೇಲ್, ಶಾಸ್ತ್ರಿಯನ್ನೇ ಬಿಡದವರು ಅಣ್ಣಾನನ್ನು ಉಳಿಸಿಯಾರೇ?

by PRATAP SIMHA
23rd April 2011
ಖಂಡಿತ ಆ ಬಗ್ಗೆ ಅನುಮಾನಗಳು ಕಾಡುತ್ತಿವೆ. ಇತರರ ಯಶಸ್ಸನ್ನು ಸಹಿಸುವ ಗುಣ ನೆಹರು ಕುಟುಂಬದ ರಕ್ತದಲ್ಲೇ ಇಲ್ಲ. ಭಾರತ ರಾಷ್ಟ್ರೀಯ ಸೇನೆಯನ್ನು (INA) ಕಟ್ಟಿದ್ದ ಸುಭಾಷ್್ಚಂದ್ರ ಬೋಸ್, ಬರ್ಮಾ ಮೂಲಕ ಬ್ರಿಟಿಷರ ಮೇಲೆ ದಾಳಿ ಮಾಡುವುದಾಗಿ 1944ರಲ್ಲಿ ರೇಡಿಯೋ ಭಾಷಣ ಮಾಡಿದಾಗ  “ಸುಭಾಷ್ ವಿರುದ್ಧ ನಾನೇ ಖಡ್ಗ ಹಿಡಿದು ಹೋರಾಡುತ್ತೇನೆ’ ಎಂದು ಸಾರ್ವಜನಿಕವಾಗಿ ಹೇಳಿದ್ದ ವ್ಯಕ್ತಿ ಜವಾಹರಲಾಲ್ ನೆಹರು. ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುವ ಸೂಚನೆಯನ್ನು ಸ್ವಾತಂತ್ರ್ಯ ಪೂರ್ವದಲ್ಲೇ ನೀಡಿದ್ದರು. ಅಂತಹ ನೆಹರು ಕುಟುಂಬ ಇಡೀ ದೇಶವಾಸಿಗಳ ಕಣ್ಣಲ್ಲಿ ಹೀರೋ ಆಗಿ ಹೊರಹೊಮ್ಮಿರುವ ಅಣ್ಣಾ ಹಜಾರೆಯವರನ್ನು ಬಿಡುತ್ತದೆಯೇ? ಕಪಿಲ್ ಸಿಬಲ್, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ಮನೀಶ್ ತಿವಾರಿ ನೀಡುತ್ತಿರುವ ಹೇಳಿಕೆಗಳು, ಕೆಸರೆರಚುವ ಪ್ರಯತ್ನಗಳು ಏನನ್ನು ಸೂಚಿಸುತ್ತಿವೆ? ಇದುವರೆಗೂ ನೆಹರು ಕುಟುಂಬ ಹಾಗೂ ಕಾಂಗ್ರೆಸ್ ಭಟ್ಟಂಗಿಗಳು  “ತುಳಿದು’ ಬಂದ ಹಾದಿಯಾದರೂ ಹೇಗಿದೆ?
ಘಟನೆ-1
“The power of reconstruction is always greater than the power of destruction”! ನಮ್ಮ ದೇಶದ ಅತ್ಮಗೌರವದ ಪ್ರತೀಕದಂತಿರುವ ಸೋಮನಾಥ ದೇವಾಲಯದ ಅಡಿಗಲ್ಲು ಇಡುವ ಸಮಾರಂಭಕ್ಕೆ ಅಗಮಿಸಿದ್ದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೆಂದಿದ್ದರು. ಜುನಾಯದ್, ಮಹಮದ್ ಘಜ್ನಿ, ಅಲ್ಲಾವುದ್ದೀನ್ ಖಿಲ್ಜಿ, ಮುಜಫ್ಫರ್ ಶಾ, ಮಹಮದ್ ಬೆಗ್ದಾ ಹಾಗೂ ಕೊನೆಯದಾಗಿ ಮೊಘಲ್ ದೊರೆ ಔರಂಗಜೇಬ ಇವರಿಂದ ಸ್ವಾತಂತ್ರ್ಯ ಬರುವುದಕ್ಕೂ ಮುನ್ನ ಸೋಮನಾಥ ದೇವಾಲಯ 6 ಬಾರಿ ನಾಶಗೊಂಡು 5 ಸಲ ಪುನರ್ ನಿರ್ಮಾಣಗೊಂಡಿತ್ತು. ಸೋಮನಾಥ ದೇವಾಲಯವಿದ್ದಿದ್ದು ಪ್ರಭಾಸ್ ಪಟ್ಟಣದಲ್ಲಿ. ಅದು ಜುನಾಗಡ್್ಗೆ ಸೇರಿತ್ತು. ಜನಸಂಖ್ಯೆಯ ಶೇ. 80 ರಷ್ಟು ಹಿಂದುಗಳೇ ಇದ್ದರೂ ಅಲ್ಲಿನ ನವಾಬ ಜುನಾಗಢ್ ಅನ್ನು ಪಾಕಿಸ್ತಾನದೊಂದಿಗೆ ಸೇರ್ಪಡೆ ಮಾಡಲು ಹವಣಿಸುತ್ತಿದ್ದ. ಇದರ ವಿರುದ್ಧ ಬಂಡೆದ್ದ ಜನ ಶಾಮಲ್್ದಾಸ್ ಗಾಂಧಿ ನೇತೃತ್ವದಲ್ಲಿ ಬದಲಿ ಸರ್ಕಾರ ರಚಿಸಿದರು. ದಿಕ್ಕೆಟ್ಟ ನವಾಬ ಪಾಕಿಸ್ತಾನಕ್ಕೆ ಪಲಾಯನ ಮಾಡಿದ. ಆನಂತರ ಭಾರತೀಯ ಒಕ್ಕೂಟಕ್ಕೆ ಸೇರಿಸಿಕೊಳ್ಳುವಂತೆ ಶಾಮಲ್್ದಾಸ್ ಕರೆಕೊಟ್ಟ ಕಾರಣ 1947, ನವೆಂಬರ್ 12ರಂದು ಖುದ್ದು ಅಗಮಿಸಿದ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್, ಜುನಾಗಢದ ಸೇರ್ಪಡೆ ಜತೆಗೆ ಸೋಮನಾಥ ದೇವಾಲಯದ ಪುನರ್ ನಿರ್ಮಾಣಕ್ಕೂ ಆದೇಶ ನೀಡಿದರು. ಅಂತಹ ಪ್ರಸ್ತಾವವನ್ನಿಟ್ಟುಕೊಂಡು ಸರ್ದಾರ್ ಪಟೇಲ್, ಕೆ.ಎಂ. ಮುನ್ಷಿ ಮತ್ತಿತರ ಕಾಂಗ್ರೆಸ್ ನಾಯಕರು ಗಾಂಧೀಜಿ ಬಳಿಗೆ ಹೋದಾಗ ಬಹಳ ಖುಷಿಯಿಂದಲೇ ಸಮ್ಮತಿಸಿದ ಮಹಾತ್ಮ, ಜನರ ದೇಣಿಗೆಯಿಂದ ಮರು ನಿರ್ಮಾಣ ಕಾರ್ಯ ನಡೆಯಲಿ ಎಂದರು.
ಅದರೆ ಈ ಘಟನೆಯಿಂದ ಮುಸ್ಲಿಮರಿಗಿಂತ ಹೆಚ್ಚು ಕೋಪ ಬಂದಿದ್ದು ಕಾಶ್ಮೀರಿ ಪಂಡಿತ ಜವಾಹರಲಾಲ್ ನೆಹರುಗೆ!
ಅವರು ಸೋಮನಾಥ ದೇವಾಲಯದ ಪುನರ್ ನಿರ್ಮಾಣವನ್ನು ಹಿಂದು ಪುನರುತ್ಥಾನದಂತೆ ಕಂಡರು. ಆದರೇನಂತೆ ಉಕ್ಕಿನ ಮನುಷ್ಯ ಪಟೇಲ್ ಗಂಡೆದೆಯ ಮುಂದೆ ಉತ್ತರ ಕುಮಾರನಂತಿದ್ದ ನೆಹರು ಆರ್ಭಟ ನಡೆಯಲಿಲ್ಲ. ಸೋಮನಾಥ ದೇವಾಲಯದ ಸ್ಥಳದಲ್ಲಿದ್ದ ಮಸೀದಿಯನ್ನು ಎತ್ತಂಗಡಿ ಮಾಡಿದರು. ಈ ಮಧ್ಯೆ ಸರ್ದಾರ್ ಪಟೇಲ್ ಹಾಗೂ ಗಾಂಧೀಜಿ ಇಬ್ಬರೂ ತೀರಿಕೊಂಡರು. ಮುನ್ಷಿ ನೇತೃತ್ವದಲ್ಲಿ ಪುನರ್ ನಿರ್ಮಾಣ ಕಾರ್ಯವೇನೋ ಮುಂದುವರಿಯಿತು. ಆದರೆ 1964ರವರೆಗೂ ಬದುಕಿದ್ದ ನೆಹರು, ಸರ್ದಾರ್ ಪಟೇಲ್ ಹೆಸರನ್ನು ಯಾವೊಬ್ಬ ಕಾಂಗ್ರೆಸ್ಸಿಗರೂ ಎತ್ತದಂತೆ ಮಾಡಿದರು! ಇವತ್ತು ಬಿಜೆಪಿ, ಆರೆಸ್ಸೆಸ್ಸಿಗರ ಬಾಯಲ್ಲಿ ಸರ್ದಾರ್ ಪಟೇಲ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಕೇಳಬಹುದು. ರಾಷ್ಟ್ರವಾದಿಗಳಿಗಂತೂ ಸರ್ದಾರ್ ಪಟೇಲ್ ಯಾವತ್ತೂ ಆದರ್ಶಪ್ರಾಯ. ಆದರೆ ಒಬ್ಬ ಪಂಚಾಯಿತಿ ಮಟ್ಟದ ಕಾಂಗ್ರೆಸ್ಸಿಗನಿಂದ ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕನವರೆಗೂ ಒಬ್ಬರಾದರೂ ಸರ್ದಾರ್ ಪಟೇಲ್ ನಮ್ಮ ಹೆಮ್ಮೆಯ ನಾಯಕ ಎಂದು ಹೇಳುವುದನ್ನು ಕೇಳಿದ್ದೀರಾ?!
ಘಟನೆ-2
ಆ ದಿನ 1965, ಆಗಸ್ಟ್ 31. ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮಧ್ಯಾಹ್ನದ ಊಟಕ್ಕೆಂದು ಬಂದಿದ್ದರು. ಇನ್ನೇನು ತಿನ್ನಲು ಆರಂಭಿಸಬೇಕು, ಅಷ್ಟರಲ್ಲಿ ಬಳಿಗೆ ಬಂದ ಅಪ್ತ ಕಾರ್ಯದರ್ಶಿ ಕಿವಿಯಲ್ಲೇನೋ ಉಸುರಿದರು. ಊಟ ಮರೆತ ಶಾಸ್ತ್ರೀಜಿ,  “10 ಜನಪಥ್್’ನಲ್ಲಿರುವ ಪ್ರಧಾನಿ ಕಚೇರಿಯತ್ತ ಧಾವಿಸಿದರು. ಅಲ್ಲಿ ಭೂಸೇನೆ, ನೌಕಾ ದಳ ಹಾಗೂ ವಾಯುಪಡೆಯ ಮುಖ್ಯಸ್ಥರು ಪ್ರಧಾನಿಗಾಗಿ ಕಾದಿದ್ದರು. ಏನಾಗುತ್ತಿದೆ ಎಂದು ಎಲ್ಲರೂ ಯೋಚಿಸುವಷ್ಟರಲ್ಲಿ, ಅಂದರೆ ಐದೇ ನಿಮಿಷದಲ್ಲಿ ಸಭೆ ಮುಗಿಯಿತು.  “ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ’ ಎಂದು ಹದಿನೈದು ದಿನಗಳ ಹಿಂದಷ್ಟೇ ಕೆಂಪುಕೋಟೆಯ ಮೇಲೆ ಗುಡುಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ, ಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಮೇಲೆ ಯುದ್ಧ ಘೋಷಣೆ ಮಾಡಿದ್ದರು! ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿದೊಡ್ಡ ಸಂಘರ್ಷ ಅದಾಗಿತ್ತು. ಭಾರತೀಯ ಸೇನೆ ಲಾಹೋರ್ ಸಮೀಪಕ್ಕೆ ತಲುಪಿತು. ಪಾಕ್ ಪರ ರಣರಂಗಕ್ಕಿಳಿಯುವುದಾಗಿ ಚೀನಾ ಬೆದರಿಕೆ ಹಾಕಿದರೂ ಶಾಸ್ತ್ರೀಜಿ ಬಗ್ಗಲಿಲ್ಲ. 1948ರಲ್ಲಿ ಪಾಕ್ ದಾಳಿ ಮಾಡಿದಾಗ ರಣಹೇಡಿ ನೆಹರು ವಿಶ್ವಸಂಸ್ಥೆಯ ಕದತಟ್ಟಿದರೆ, 1965ರಲ್ಲಿ ವಿಶ್ವಸಂಸ್ಥೆಯೇ ಓಡಿಬರುವಂತೆ ಮಾಡಿದರು ಶಾಸ್ತ್ರೀಜಿ! 1962ರಲ್ಲಿ ಚೀನಾ ಎದುರು ಉಂಟಾದ ಸೋಲು ಇಡೀ ದೇಶದ ಅತ್ಮಸ್ಥೈರ್ಯವನ್ನು ಉಡುಗಿಸಿದರೆ 1965ರಲ್ಲಿ ಗೆಲುವು ತಂದುಕೊಡುವ ಮೂಲಕ ಭಾರತೀಯರು ಮತ್ತೆ ಎದೆಯುಬ್ಬಿಸಿ ನಡೆಯುವಂತೆ ಮಾಡಿದರು ಶಾಸ್ತ್ರೀಜಿ. ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ 17 ವರ್ಷ ಪ್ರಧಾನಿಯಾಗಿದ್ದ ನೆಹರು ಅವರನ್ನು ಧೈರ್ಯ, ಛಲ, ಜನಪ್ರಿಯತೆ ಎಲ್ಲದರಲ್ಲೂ ಮೀರಿಸಿದರು. ಅದು ಕಾಂಗ್ರೆಸ್್ನಲ್ಲಿದ್ದ ನೆಹರು ಪುತ್ರಿ ಇಂದಿರಾ ಗಾಂಧಿಗಾಗಲಿ, ನೆಹರು ಕುಂಟುಂಬದ ಭಟ್ಟಂಗಿಗಳಿಗಾಗಲಿ ಪಥ್ಯವಾಗಲಿಲ್ಲ.
1966, ಜನವರಿ 11ರ ರಾತ್ರಿ.
ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ತಾಷ್ಕೆಂಟ್್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದರು. ನೀಲಿಗಟ್ಟಿದ ದೇಹ ಭಾರತಕ್ಕೆ ಬಂತು. ಒಂದೆಡೆ ಇಡೀ ದೇಶವೇ ದುಃಖದ ಮಡುವಿಗೆ ಬಿದ್ದಿದ್ದರೆ ಇನ್ನೊಂದೆಡೆ ನೆಹರು ಕುಟುಂಬದ ಭಟ್ಟಂಗಿಗಳು ಶವಪರೀಕ್ಷೆಯನ್ನೂ ಮಾಡಲು ಬಿಡದೆ ಶಾಸ್ತ್ರೀಜಿಯವರನ್ನು ಇತಿಹಾಸದ ಕಸದಬುಟ್ಟಿಗೆ ದೂಡುವ ಪಿತೂರಿ ನಡೆಸುತ್ತಿದ್ದರು. ಗಾಂಧೀಜಿ, ನೆಹರು ಅವರನ್ನು ಅಂತ್ಯಸಂಸ್ಕಾರ ಮಾಡಿದ್ದ ಸ್ಥಳದಲ್ಲೇ ಶಾಸ್ತ್ರೀಜಿಯವರ ಕೊನೆಯ ವಿಧಿ-ವಿಧಾನಗಳನ್ನು ನೆರವೇರಿಸಲು ಕಾಂಗ್ರೆಸ್ಸಿಗರೇ ವಿರೋಧ ವ್ಯಕ್ತಪಡಿಸಿದರು. ಅವರ ದೇಹವನ್ನು ಅಲಹಾಬಾದ್್ಗೆ ಕೊಂಡೊಯ್ಯುವಂತೆ ಸೂಚಿಸಿದರು. ಇಂತಹ ಧೂರ್ತತನವನ್ನು ಜನರ ಮುಂದಿಡುವುದಾಗಿ ಅವರ ಪತ್ನಿ ಲಲಿತಾ ಶಾಸ್ತ್ರಿ ಬೆದರಿಕೆ ಹಾಕಿದಾಗ ದೆಹಲಿಯಲ್ಲೇ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಲಾಯಿತು. ಅವರ ಸಮಾಧಿಯ ಮೇಲೆ  “ಜೈ ಜವಾನ್, ಜೈ ಕಿಸಾನ್್’ ಎಂದು ಕೆತ್ತುವುದಕ್ಕೂ ಅಡ್ಡಿಪಡಿಸಿದರು. ಲಲಿತಾ ಶಾಸ್ತ್ರಿಯವರು ಉಪವಾಸ ಕೂರುವುದಾಗಿ ಮತ್ತೆ ಧಮಕಿ ಹಾಕಬೇಕಾಗಿ ಬಂತು. ದುಃಖದಿಂದ ಹೊರಬರುವ ಮೊದಲೇ ಕಾಂಗ್ರೆಸ್ ಕಚೇರಿಯಿಂದ ಶಾಸ್ತ್ರೀಜಿಯವರ ಭಾವಚಿತ್ರವನ್ನು ಕಿತ್ತೊಗೆಯಲಾಗಿತ್ತು. ಲಾಲ್ ಬಹಾದ್ದೂರ್ ಶಾಸ್ತ್ರಿ ಬಗ್ಗೆ ನೆಹರುಗೆ ಎಷ್ಟು ಮತ್ಸರವಿತ್ತೆಂದರೆ ಸ್ವಾತಂತ್ರ್ಯಾನಂತರ ರಚನೆಯಾದ ಹಂಗಾಮಿ ಕೇಂದ್ರ ಸಂಪುಟಕ್ಕೆ ಶಾಸ್ತ್ರಿಯವರನ್ನು ತೆಗೆದುಕೊಂಡರೂ ಖಾತೆ ರಹಿತ ಮಂತ್ರಿಯನ್ನಾಗಿಸಿದ್ದರು. 1963ರಲ್ಲಿ ನೆಹರು ತಮ್ಮ ಸಂಪುಟದಿಂದ ಕೈಬಿಟ್ಟಾಗ ಶಾಸ್ತ್ರೀಜಿ ಪತ್ರಿಕೆಗಳಿಗೆ ಅಂಕಣ ಬರೆದು ಹೊಟ್ಟೆಹೊರೆಯಬೇಕಾಯಿತು. ಕಾಂಗ್ರೆಸ್ ಶಾಸ್ತ್ರೀಜಿ ಬಗ್ಗೆ ಎಂತಹ ಧೋರಣೆ ಅನುಸರಿಸುತ್ತಾ ಬಂದಿದೆ ಎಂದರೆ ಶಾಸ್ತ್ರೀಜಿ ಜನ್ಮದಿನ ಕೂಡ ಅಕ್ಟೋಬರ್ 2ರಂದೇ ಎಂಬುದು ಎಷ್ಟು ಮಕ್ಕಳಿಗೆ ಗೊತ್ತು? 2004ರಲ್ಲಿ ಶಾಸ್ತ್ರೀಜಿಯವರ ಜನ್ಮಶತಮಾನೋತ್ಸವದ ಬಗ್ಗೆ ಕಾಂಗ್ರೆಸ್ ಯಾವ ಅಸಕ್ತಿಯನ್ನೂ ತೋರದಿದ್ದಾಗ, ಅವರ ಮಕ್ಕಳಾದ ಅನಿಲ್ ಹಾಗೂ ಸುನೀಲ್ ಶಾಸ್ತ್ರಿ ಸಾರ್ವಜನಿಕವಾಗಿ ಟೀಕಿಸಿದ್ದರು. ಹೀಗೆ ಈ ದೇಶದ ಧೀರ ಪುತ್ರನನ್ನೇ ಸಹಿಸಲಿಲ್ಲ ಕಾಂಗ್ರೆಸ್.
ಘಟನೆ-3
1991, ಜೂನ್ 21. ರಾಜಕೀಯ ನಿವೃತ್ತಿ ಯಾಚಿಸಿದ್ದ ಪಾಮುಲಪರ್ತಿ ವೆಂಕಟ ನರಸಿಂಹರಾವ್, ಅಂದು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಹಾಗಂತ ಖುಷಿಪಡುವ ಸ್ಥಿತಿಯಲ್ಲಿರಲಿಲ್ಲ. ಹಣದುಬ್ಬರ ಶೇ. 17ಕ್ಕೇರಿತ್ತು. ಸಾಲ 90 ಶತಕೋಟಿ ಪೌಂಡ್್ಗೇರಿತ್ತು. 100 ಕೋಟಿ ಸಾಲ ಕೊಡುವುದಕ್ಕೂ ವಿಶ್ವಬ್ಯಾಂಕ್ ಹಾಗೂ ಎಡಿಬಿ ಸಿದ್ಧವಿರಲಿಲ್ಲ. ಹಿಂದಿನ ಪ್ರಧಾನಿ ಚಂದ್ರಶೇಖರ್ ಚಿನ್ನವನ್ನು ಅಡವಿಟ್ಟಿದ್ದರು. ಭಾರತ ಡಿಫಾಲ್ಟರ್ ಆಗುವುದು ಖಚಿತವಾಗಿತ್ತು. ದಿವಾಳಿಯಾಗುವುದೆಂದರೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ, ಪುರಾತನ ನಾಗರಿಕತೆ ಎಂಬ ಘನತೆ, ಹೆಗ್ಗಳಿಕೆ ಮಣ್ಣು ಪಾಲಾದಂತೆ. ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳೆಂಬ ಬಿಳಿ ಆನೆಗಳು, ಪರಮ ಭ್ರಷ್ಟ ನೌಕರಶಾಹಿಯಿಂದಾಗಿ ದೇಶ ಹೀನಾಯ ಸ್ಥಿತಿಗೆ ತಲುಪಿತ್ತು. ಇಂತಹ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಪ್ರಾಧಾನಿಯಾಗಿ ನೆಹರು ಪ್ರಣೀತ ಅರೆ ಸಮಾಜವಾದವನ್ನು (Quasi Socialism) ತಿಪ್ಪೆಗೆ ಎಸೆಯುವುದು, ಇಂದಿರಾ ಗಾಂಧಿ ಹುಟ್ಟು ಹಾಕಿದ್ದ  “ಬಾಬು ಸಂಸ್ಕೃತಿ’, ಇನ್್ಸ್ಪೆಕ್ಟರ್ ರಾಜ್, ಪರ್ಮಿಟ್ ರಾಜ್, ಲೈಸೆನ್ಸ್ ರಾಜ್್ಗಳಿಗೆ ತಿಲಾಂಜಲಿ ಹಾಕುವುದು ಸಾಮಾನ್ಯ ವಿಷಯವಾಗಿರಲಿಲ್ಲ. ಅದರೂ ಧೈರ್ಯ ತೋರಿ ಆರ್ಥಿಕ ಉದಾರೀಕರಣ ನೀತಿಗಳನ್ನು ಜಾರಿಗೆ ತಂದವರು ನರಸಿಂಹರಾವ್. ಇವತ್ತು ಪ್ಲಾಸ್ಟಿಕ್ ಮನಿ, High End Technology, ಬಗೆ ಬಗೆಯ ಕಾರು, ಕೈಗೆಟುಕುವ ಬೆಲೆಯಲ್ಲಿ ಟಿವಿ, ಫ್ರಿಜ್, ಬ್ಯಾಂಕಿಂಗ್, ಇಂಟರ್್ನೆಟ್ ಸೇವೆ ಲಭ್ಯವಾಗಿದ್ದರೆ ಅದಕ್ಕೆ ನರಸಿಂಹರಾವ್ ಕಾರಣ. ಅವರನ್ನು ಸುಧಾರಣಾವಾದಿ, ವಿದ್ವಾಂಸ, ವಿಧ್ವಂಸಕ ಏನು ಬೇಕಾದರೂ ಕರೆಯಿರಿ. ಲಕೂಭಾಯಿ ಪಾಠಕ್, ಸೈಂಟ್ ಕೀಟ್ಸ್, ಜೆಎಂಎಂ ಹಗರಣಗಳನ್ನಿಟ್ಟುಕೊಂಡು ಜರೆಯಿರಿ. ಅದರೆ ಭಾರತ ಇವತ್ತು ಚೀನಾಕ್ಕೆ ಸಡ್ಡು ಹೊಡೆಯುವಂತೆ ಬೆಳೆದಿದ್ದರೆ ಅದರ ಹಿಂದೆ ನರಸಿಂಹ ರಾವ್ ಪರಿಶ್ರಮ, ದೂರದೃಷ್ಟಿಯಿದೆ. ಇನ್ನು 1993ರಲ್ಲಿ ಸಂಭವಿಸಿದ ಭೀಕರ ಲಾತೂರ್ ಭೂಕಂಪವನ್ನು ನಿಭಾಯಿಸಿದ ರೀತಿಯನ್ನು ಮರೆಯಲು ಸಾಧ್ಯವೆ?
ಇಂತಹ ನರಸಿಂಹರಾವ್ 2004, ಡಿಸೆಂಬರ್ 23ರಂದು ರಾಜಧಾನಿ ದೆಹಲಿಯಲ್ಲಿ ಅಗಲಿದಾಗ ಕಾಂಗ್ರೆಸ್ ಮಾಡಿದ್ದೇನು ಗೊತ್ತೆ?
ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಿಡಲು ಎಐಐಸಿ ಕಚೇರಿಯ ಒಳಕ್ಕೆ ಕೊಂಡೊಯ್ಯುವುದಕ್ಕೂ ಅವಕಾಶ ನೀಡಲಿಲ್ಲ, ಗೇಟನ್ನೇ ಮುಚ್ಚಿ ಬಿಟ್ಟರು! ಕನಿಷ್ಠ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲೇ ಜಾಗ ಕೊಡಿ ಎಂಬ ರಾವ್ ಕುಟುಂಬದ ಮನವಿಗೂ ಸೋನಿಯಾ ಗಾಂಧಿ ಸೊಪ್ಪು ಹಾಕಲಿಲ್ಲ. ಕೊನೆಗೆ ಹೈದರಾಬಾದ್್ನಲ್ಲಿ ನಡೆದ ಅಂತ್ಯ ಸಂಸ್ಕಾರಕ್ಕೆ ಎಚ್.ಡಿ. ದೇವೇಗೌಡ, ಲಾಲ್್ಕೃಷ್ಣ ಆಡ್ವಾಣಿಯವರಂಥ ವಿರೋಧ ಪಕ್ಷದ ನಾಯಕರು ಆಗಮಿಸಿದರಾದರೂ ಸೋನಿಯಾ ಗಾಂಧಿ ಅಂತಹ ಸೌಜನ್ಯ ತೋರಲಿಲ್ಲ. ಕಳೆದ ವರ್ಷ ನಡೆದ ಕಾಂಗ್ರೆಸ್್ನ 125ನೇ ಜಯಂತಿ ವೇಳೆ ಮಾಡಿದ 15 ನಿಮಿಷಗಳ ಭಾಷಣದಲ್ಲಿ ಕಾಂಗ್ರೆಸ್್ನ ಎಲ್ಲ ಪ್ರಧಾನಿಗಳ ಹೆಸರನ್ನೂ ಉಲ್ಲೇಖಿಸಿದ ಸೋನಿಯಾ, “Rajiv Gandhi scripted the course of Economic policies that were followed by the government (headed by Rao) for the following five years” ಎಂದರೇ ಹೊರತು ರಾವ್ ಅವರ ಸಣ್ಣ ಪ್ರಸ್ತಾಪವನ್ನೂ ಮಾಡಲಿಲ್ಲ. ಆರ್ಥಿಕ ಉದಾರೀಕರಣದ ರೂವಾರಿ ರಾವ್ ಅವರಾಗಿದ್ದರೂ ರಾಜೀವ್್ಗೆ ಕ್ರೆಡಿಟ್ ಕೊಡಲು ಪ್ರಯತ್ನಿಸಿದರು. ಕಾಂಗ್ರೆಸ್್ನ ಇಂತಹ ಧೋರಣೆಯ ಬಗ್ಗೆ ಬರೆಯುತ್ತಾ ಖ್ಯಾತ ಇತಿಹಾಸಜ್ಞ ರಾಮಚಂದ್ರ ಗುಹಾ ಹೀಗೆನ್ನುತ್ತಾರೆ-  ”To forget his achievements, but to remember his mistakes, is a product of cold and deliberate calculation”.
ಇಷ್ಟು ಮಾತ್ರವಲ್ಲ, ಸೀಟು ಬಿಡಲೊಪ್ಪದ ಕಾಂಗ್ರೆಸ್ ಅಧ್ಯಕ್ಷ ಸೀತಾರಾಮ್ ಕೇಸರಿಯವರನ್ನು 1998ರಲ್ಲಿ ಪದಚ್ಯುತಗೊಳಿಸಿ ಸೋನಿಯಾ ಗಾಂಧಿಯವರನ್ನು ಆ ಸ್ಥಾನಕ್ಕೆ ನೇಮಕ ಮಾಡಿದ ಅಕೆಯ ಬೆಂಬಲಿಗ ಗೂಂಡಾಗಳು ಕೇಸರಿಯವರನ್ನು ಎಐಸಿಸಿ ಕಚೇರಿಯಿಂದ ಎತ್ತಿ ಆಚೆ ಹಾಕಿದ್ದರು. ಜವಾಹರಲಾಲ್ ನೆಹರು ಕುಟುಂಬದ ಬುದ್ಧಿಯೇ ಅಂಥದ್ದು, ತನಗಿಂತ ಪ್ರಸಿದ್ಧರಾಗುವುದನ್ನು ಅದು ಸಹಿಸುವುದೇ ಇಲ್ಲ. ಸ್ವಾತಂತ್ರ್ಯ ಬಂದ ತರುವಾಯ ರಚನೆಯಾದ ಸರಕಾರದಲ್ಲಿ ಅಂತಹ ಅಂಬೇಡ್ಕರ್ ಅವರನ್ನೇ ಮಂತ್ರಿ ಮಾಡುವುದಕ್ಕೆ ನೆಹರು ಸಿದ್ಧರಿರಲಿಲ್ಲ. 1951-52ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯನ್ನು ನಿಲ್ಲಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಕಾಂಗ್ರೆಸ್. ಹಾಗಿರುವಾಗ ಏಕಾಏಕಿ ಬಂದು ಇಡೀ ರಾಷ್ಟ್ರದ ಮೆಚ್ಚುಗೆಗೆ ಪಾತ್ರರಾಗಿರುವ ಅಮಾಯಕ ಅಣ್ಣಾ ಹಜಾರೆಯವರನ್ನು ಸೋನಿಯಾ ಗಾಂಧಿಯವರ ಚೇಲಾಗಳು ಬಿಡುತ್ತಾರೆಯೇ? ಈ ದೇಶದ ಧೀರ ಪುತ್ರರಾದ ಸುಭಾಷ್್ಚಂದ್ರ ಬೋಸ್, ಅಂಬೇಡ್ಕರ್, ಸರ್ದಾರ್ ಪಟೇಲ್, ಲಾಲ್ ಬಹಾದ್ದೂರ್ ಶಾಸ್ತ್ರಿಯವರನ್ನೇ ಹೊಸಕಿಹಾಕಲು ಪ್ರಯತ್ನಿಸಿದ ನೆಹರು ಕುಟುಂಬ ಅಣ್ಣಾನ ಯಶಸ್ಸನ್ನು ಸಹಿಸಿಕೊಂಡೀತೆ? ಈಗಾಗಲೇ ಅದರ ಎಲ್ಲ ಸೂಚನೆಗಳೂ ಕಾಣುತ್ತಿವೆ.
Beware of dogs !
ಇಂತಹ ಎಚ್ಚರಿಕೆಯ ಫಲಕಗಳನ್ನು ಶ್ರೀಮಂತರ ಮನೆ ಮುಂದೆ ಕಾಣಬಹುದು. ಕಪಿಲ್ ಸಿಬಲ್, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ಮನೀಶ್ ತಿವಾರಿಗಳಿರುವವರೆಗೂ ಸೋನಿಯಾ ಗಾಂಧಿಯವರಿಗೆ ಅಂತಹ ಅಗತ್ಯವೇ ಎದುರಾಗುವುದಿಲ್ಲ! ಇವರು ವರ್ತಿಸುತ್ತಿರುವ ರೀತಿಯನ್ನು ನೋಡಿದರೆ ಸೋನಿಯಾ ಮನೆ ಮುಂದೆ “Beware of Sibal, Moily, Digvijay singh and Tiwari”ಎಂದು ಹಾಕಬೇಕೇನೋ ಎಂದನಿಸುತ್ತಿದೆ. ಇವರೇನು ಸಚಿವ ಮಹಾಶಯರೋ ಅಥವಾ ಸೋನಿಯಾ ಗಾಂಧಿಯವರ ಸಾಕು ಪ್ರಾಣಿಗಳೋ? ಲೋಕಾಯುಕ್ತ ಸಂತೋಷ್ ಹೆಗ್ಡೆಯವರ ಕ್ಷಮತೆ ಬಗ್ಗೆ ಪ್ರಶ್ನಿಸುತ್ತಿರುವ ಈ ದಿಗ್ವಿಜಯ್ ಸಿಂಗ್್ಗೇನಾದರೂ ಮತಿಭ್ರಮಣೆಯಾಗಿದೆಯೇ?
“ನಿಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಯೊಬ್ಬರು ಒಂದರ ಹಿಂದೆ ಒಂದು ಹೇಳಿಕೆ ನೀಡುತ್ತಿದ್ದಾರೆ. ಆತನಿಗೆ ಕಾಂಗ್ರೆಸ್್ನ ಬೆಂಬಲವಿದೆ ಎಂದೇ ನಾನು ಭಾವಿಸುತ್ತೇನೆ. ಬಹಳಷ್ಟು ಹೇಳಿಕೆಗಳು ಸತ್ಯಕ್ಕೆ ದೂರವಾದವು. ಆತನ ಉದ್ದೇಶ ಜನರಲ್ಲಿ ಗೊಂದಲ ಸೃಷ್ಟಿಸುವುದು, ದಾರಿತಪ್ಪಿಸುವುದು ಹಾಗೂ ಲೋಕಪಾಲ ಮಸೂದೆ ಸಂಬಂಧ ನಡೆಯುತ್ತಿರುವ ಪ್ರಕ್ರಿಯೆಯನ್ನು ಹಾಳುಗೆಡುವುದಾಗಿದೆ. ಇಂತಹ ಕೃತ್ಯಗಳಿಗೆ ನಿಮ್ಮ ವೈಯಕ್ತಿಕ ಒಪ್ಪಿಗೆ ಇದೆಯೇ?” ಎಂದು ಏಪ್ರಿಲ್ 18ರಂದು ಸೋನಿಯಾ ಗಾಂಧಿಯವರಿಗೆ ಬರೆದಿರುವ ಪತ್ರದಲ್ಲಿ ಅಣ್ಣಾ ಹಜಾರೆ ಬಹಳ ಮುಗ್ಧವಾಗಿ  ಕೇಳಿದ್ದಾರೆ. ಇದನ್ನೆಲ್ಲಾ ಮಾಡಿಸುತ್ತಿರುವುದೇ ಸೋನಿಯಾ ಗಾಂಧಿ ಎಂಬುದು ಎಂತಹ ಕಟುವಾಸ್ತವ ಅಲ್ಲವೇ?
ಛೇ!

ಸೋಮವಾರ, ಆಗಸ್ಟ್ 15, 2011

ಬ್ರಿಟೀಷರ ಕಾಲದಲ್ಲಿ ಸತ್ಯಾಗ್ರಹಿಗಳ ಬಂಧನ ಓಕೆ ಆದರೆ ಇಂದು?




ಇಂದು ಬೆಳಗ್ಗೆ ಗಾಂಧಿವಾದಿ ಅಣ್ಣಾ ಹಜಾರೆ ಜೆಪಿ ಪಾರ್ಕ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಆದರೆ ದೆಹಲಿ ಪೊಲೀಸ್ ನಿರಶನ ಆರಂಭಕ್ಕೂ ಮುನ್ನ ಅಣ್ಣಾ ಅವರನ್ನು ಬಂಧಿಸಿದ್ದಾರೆ. ಜತೆಯಲ್ಲಿ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾ ಹಜಾರೆ ತಂಡದ ಸದಸ್ಯೆ ಕಿರಣ್ ಬೇಡಿ, ಶಾಂತಿ ಭೂಷಣ್,  ಅರವಿಂದ್ ಕೇಜ್ರಿವಾಲ್  ಹಾಗು ನೂರಾರು ಕಾರ್ಯಕರ್ತರನ್ನು ಕೂಡಾ ಬಂಧಿಸಲಾಗಿದೆ.
ಕೆಲ ಕೇಂದ್ರ ಮಂತ್ರಿಗಳು, ಕಾಂಗ್ರೆಸ್ಸಿನ ಅಧಿಕೃತ ವಕ್ತಾರರು ಹಾಗು ಪ್ರಧಾನ ಕಾರ್ಯದರ್ಶಿಗಳು ಹೇಗೆಗೆಲ್ಲ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದು ನಾವೆಲ್ಲ ಗಮನಿಸಿದ್ದೇವೆ. ಮೊದಲಿನೊಂದಲೂ ಸತ್ಯಾಗ್ರಹವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಯುತಿತ್ತು. ಇಂದು ಆರಂಭವಾಗುವ ಮುನ್ನವೇ ಬಂಧಿಸಿರುವುದು ನಮ್ಮೆಲ್ಲರ ಆಕೋಶಕ್ಕೆ ಗುರಿಯಾಗಿದ್ದಾರೆ. ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಸಂತೋಷ ಪಟ್ಟಿದ್ದೆವು, ಆದರೆ ಇಂದಿನ ಘಟನೆ ಆ ಸಂತೋಷವನ್ನು ಕಿತ್ತು ಕೊಂಡಿದೆ.
ಬ್ರಿಟೀಷರ ದಾಸ್ಯದಿಂದ ಹೊರಬರಲು ಲಕ್ಷಾಂತರ ಜನರು ಪ್ರಾಣತ್ಯಾಗ ಮಾಡಿದ್ದರು ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಲಭ್ಯವಾಗದ ಹಾಗೆ ಮಾಡಿ ಕೇವಲ ಕಾಂಗ್ರೆಸ್ಸಿನ ಕೆಲ ಮುಖಂಡರುಗಳಿಗೆ ಜೈಕಾರ ಹಾಕುವ ರೀತಿಯಲ್ಲಿ ಪಠ್ಯ ಪುಸ್ತಕವನ್ನು ರೂಪಿಸಿ ಜನರನ್ನು ದಾರಿತಪ್ಪಿಸಿದ್ದೇ ಅಲ್ಲದೆ ಅಧಿಕಾರ ಮದದಿಂದ ಭ್ರಷ್ಟಚಾರ ದಲ್ಲಿ ತೊಡಗಿರುವ ಪ್ರತಿಯೊಬ್ಬರನ್ನು ಮಟ್ಟ ಹಾಕಲು ಪ್ರಬಲವಾದ ಕಾನೂನನ್ನು ರೂಪಿಸಬೇಕು ಎಂದು ಹೋರಾಡುತ್ತಿರುವ ಅಣ್ಣಾ ಹಜಾರೆ ಯ ಸತ್ಯಾಗ್ರಹವನ್ನು ಹತ್ತಿಕ್ಕುವುದಕ್ಕೆ ಶ್ರಮಿಸುತ್ತಿರುವ ಇವರಿಗೆ ಏನನ್ನಬೇಕು.?
ಧಿಕ್ಕಾರವಿರಲಿ ಇಂತಹಜನರಿಗೆ.
 ದಯಮಾಡಿ ಯಾರು ಜಾತಿ, ಧರ್ಮ, ಪಕ್ಷನಿಷ್ಟೆ ಹಾಗೂ ವ್ಯಕ್ತಿ ನಿಷ್ಟೆಗೆ ಬಲಿಯಾಗದೆ, ಭ್ರಷ್ಟಾಚಾರದಲ್ಲಿ ತೊಡಗಿರುವ ಯಾವುದೇ ಪಕ್ಷ ಹಾಗು ವ್ಯಕ್ತಿಗಳಿಗೆ ಚುನಾವಣೆಗಳಲ್ಲಿ ಸರಿಯಾದ ಪಾಠಕಲಿಸಬೇಕು.
ಏನಂತೀರಾ?

ಭಾನುವಾರ, ಆಗಸ್ಟ್ 14, 2011

ಸರ್ವರಿಗೂ ಸ್ವಾತಂತ್ರ ದಿನೋತ್ಸವದ ಶುಭಾಶಯಗಳು

ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯಕ್ಕೆ ಕಾರಣೀಭೂತರಾದ ಪ್ರತಿಯೊಬ್ಬ ಹಿರಿಯರಿಗೆ ನಮ್ಮ  ನಮನಗಳು.

ಸರ್ವರಿಗೂ ಸ್ವಾತಂತ್ರ ದಿನೋತ್ಸವದ ಶುಭಾಶಯಗಳು

ವಂದೇ ಮಾತರಂ. 

ಜೈ ಹಿಂದ್





ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ